ಲಿಂಗಾಯತ ನಾಯಕತ್ವ ಬೆಳೆಯದಂತೆ ಅಮರೇಗೌಡ ಬಯ್ಯಾಪುರ ಅವರು ನೋಡಿಕೊಳ್ಳುತ್ತಿದ್ದಾರೆ ಎಂದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಆರೋಪಕ್ಕೆ ಬುಧವಾರ ಸುದ್ದಿಗಾರರ ಬಳಿ ಪ್ರತಿಕ್ರಿಯಿಸಿದ ಬಯ್ಯಾಪುರ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿರುವ ನಾನೇನಾದರೂ ಬಿಜೆಪಿಯನ್ನು ಬೆಂಬಲಿಸಿದ್ದೇನೆಯೇ ಅಥವಾ ಶಾಸಕ ದೊಡ್ಡನಗೌಡ ಅವರೇ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆಯೊ ಎಂಬುದರ ಬಗ್ಗೆ ಮತಗಟ್ಟೆವಾರು ಅಂಕಿಸಂಖ್ಯೆ ಸಹಿತ ಲಿಖಿತ ದಾಖಲೆಯನ್ನೇ ಬಿಡುಗಡೆ ಮಾಡಲಾಗುವುದು ಎಂದು ತಿರುಗೇಟು ನೀಡಿದರು.