ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಮಾತನಾಡಿ,‘ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದೆ. ಅನಗತ್ಯವಾಗಿ ಓಡಾಡುವಂತಿಲ್ಲ. ವ್ಯಾಪಾರಿಗಳೂ ವ್ಯಾಪಾರ ಮಾಡುವಂತಿಲ್ಲ. ಆದರೆ ನಗರದಲ್ಲಿರುವ ಬಟ್ಟೆ ಅಂಗಡಿಯವರು ಕದ್ದು-ಮುಚ್ಚಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ದೂರುಗಳು ಬಂದಿದ್ದವು. ಹಾಗಾಗಿ ಏಕಾಏಕಿ ದಾಳಿ ನಡೆಸಲಾಯಿತು. ಆರಾಧನಾ ಬಟ್ಟೆ ಅಂಗಡಿಯಲ್ಲಿ ಮಾಲೀಕರು ವ್ಯಾಪಾರ ನಡೆಸುತ್ತಿರುವುದು ಕಂಡುಬಂತು. ಅಂಗಡಿ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.