<p><strong>ಕುಷ್ಟಗಿ:</strong> ಇಲ್ಲಿಯ ವಿವಿಧ ನ್ಯಾಯಾಲಯದಲ್ಲಿ ಶನಿವಾರ ನಡೆದ ‘ರಾಷ್ಟ್ರೀಯ ಲೋಕ್ ಅದಾಲತ್ನಲಲ್ಲಿ ಒಟ್ಟು 7 ಕೌಟುಂಬಿಕ ವ್ಯಾಜ್ಯಗಳು ರಾಜಿ ಸಂದಾನದ ಮೂಲಕ ಇತ್ಯರ್ಥಗೊಂಡಿದ್ದು ಏಳು ಜೋಡಿ ದಂಪತಿ ವ್ಯಾಜ್ಯ ಮರೆತು ಪುನಃ ಕೂಡಿ ಬಾಳಲು ಒಪ್ಪಿಕೊಂಡ ಪ್ರಸಂಗ ನಡೆಯಿತು.</p>.<p>ಹಿಂದೂ ಮದುವೆ ಕಾನೂನಿನ ಅನ್ವಯ ಹಿರಿಯ ಸಿವಿಲ್ ನ್ಯಾಯಾಲದಲ್ಲಿ 6 ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಒಂದು ಪ್ರಕರಣಗಳಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತು ವಕೀಲರ ಮಧ್ಯಸ್ಥಿಕೆಯಲ್ಲಿ ರಾಜೀಸಂಧಾನ ಏರ್ಪಟ್ಟಿದೆ. ನ್ಯಾಯಾಲಯಗಳಲ್ಲಿ 7,476 ಪ್ರಕರಣಗಳು ಬಾಕಿ ಇದ್ದು ಅವುಗಳ ಪೈಕಿ 1,828 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಗಿತ್ತು. ಅವುಗಳಲ್ಲಿ 874 ಪ್ರಕರಣಗಳು ಇತ್ಯರ್ಥ ಹೊಂದಿದ್ದು ₹2.65 ಕೋಟಿ ಪರಿಹಾರಕ್ಕೆ ಆದೇಶಿಸಲಾಗಿದೆ.</p>.<p>ಬ್ಯಾಂಕ್ ವಸೂಲಾತಿಗೆ ಸಂಬಂದಿಸಿದ ವ್ಯಾಜ್ಯ ಪೂರ್ವ ಎರಡು ಪ್ರಕರಣಗಳು ಇತ್ಯರ್ಥಗೊಂಡಿದ್ದು ₹2.95 ಲಕ್ಷ ಸಾಲ ವಸೂಲಾಗಿದೆ.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಂಜುನಾಥ್, ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌವಳಗಿ, ವಕೀಲರ ಸಂಘದ ಅಧ್ಯಕ್ಷ ದೊಡ್ಡನಗೌಡ ಪಾಟೀಲ ಉಪಸ್ಥಿತರಿದ್ದರು. ಅನೇಕ ವಕೀಲರು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಇಲ್ಲಿಯ ವಿವಿಧ ನ್ಯಾಯಾಲಯದಲ್ಲಿ ಶನಿವಾರ ನಡೆದ ‘ರಾಷ್ಟ್ರೀಯ ಲೋಕ್ ಅದಾಲತ್ನಲಲ್ಲಿ ಒಟ್ಟು 7 ಕೌಟುಂಬಿಕ ವ್ಯಾಜ್ಯಗಳು ರಾಜಿ ಸಂದಾನದ ಮೂಲಕ ಇತ್ಯರ್ಥಗೊಂಡಿದ್ದು ಏಳು ಜೋಡಿ ದಂಪತಿ ವ್ಯಾಜ್ಯ ಮರೆತು ಪುನಃ ಕೂಡಿ ಬಾಳಲು ಒಪ್ಪಿಕೊಂಡ ಪ್ರಸಂಗ ನಡೆಯಿತು.</p>.<p>ಹಿಂದೂ ಮದುವೆ ಕಾನೂನಿನ ಅನ್ವಯ ಹಿರಿಯ ಸಿವಿಲ್ ನ್ಯಾಯಾಲದಲ್ಲಿ 6 ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಒಂದು ಪ್ರಕರಣಗಳಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತು ವಕೀಲರ ಮಧ್ಯಸ್ಥಿಕೆಯಲ್ಲಿ ರಾಜೀಸಂಧಾನ ಏರ್ಪಟ್ಟಿದೆ. ನ್ಯಾಯಾಲಯಗಳಲ್ಲಿ 7,476 ಪ್ರಕರಣಗಳು ಬಾಕಿ ಇದ್ದು ಅವುಗಳ ಪೈಕಿ 1,828 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಗಿತ್ತು. ಅವುಗಳಲ್ಲಿ 874 ಪ್ರಕರಣಗಳು ಇತ್ಯರ್ಥ ಹೊಂದಿದ್ದು ₹2.65 ಕೋಟಿ ಪರಿಹಾರಕ್ಕೆ ಆದೇಶಿಸಲಾಗಿದೆ.</p>.<p>ಬ್ಯಾಂಕ್ ವಸೂಲಾತಿಗೆ ಸಂಬಂದಿಸಿದ ವ್ಯಾಜ್ಯ ಪೂರ್ವ ಎರಡು ಪ್ರಕರಣಗಳು ಇತ್ಯರ್ಥಗೊಂಡಿದ್ದು ₹2.95 ಲಕ್ಷ ಸಾಲ ವಸೂಲಾಗಿದೆ.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಂಜುನಾಥ್, ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌವಳಗಿ, ವಕೀಲರ ಸಂಘದ ಅಧ್ಯಕ್ಷ ದೊಡ್ಡನಗೌಡ ಪಾಟೀಲ ಉಪಸ್ಥಿತರಿದ್ದರು. ಅನೇಕ ವಕೀಲರು, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>