ನನಗೆ ಟಿಕೆಟ್ ಕೈ ತಪ್ಪಿದಾಗ ಸೌಜನ್ಯಕ್ಕೂ ಪಕ್ಷದ ವರಿಷ್ಠರು ಕರೆ ಮಾಡಿಲ್ಲ, ನನಗೆ ಟಿಕೆಟ್ ತಪ್ಪಿಸಿದವರು ಯಾರು? ಯಾವ ಕಾರಣಕ್ಕೆ ಟಿಕೆಟ್ ಕೊಟ್ಟಿಲ್ಲ? ಎನ್ನುವ ಮೂರು ಪ್ರಶ್ನೆಗಳನ್ನು ಅವರು ವರಿಷ್ಠರಿಗೆ ಕೇಳಿದ್ದರು. ಇವುಗಳಿಗೆ ಉತ್ತರ ನೀಡಿದರೆ ಮಾತ್ರ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡುವೆ ಎಂದು ಹೇಳಿದ್ದರು.
ಆದರೆ ಬಿಜೆಪಿಯ ರಾಜ್ಯದ ಯಾವ ನಾಯಕರೂ ಇವರ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ. ಈ ವಿಷಯ ಪ್ರಸ್ತಾಪಿಸಿದ ಸಂಗಣ್ಣ ನನ್ನ ಪ್ರಶ್ನೆಗಳಿಗೆ ಯಾರೂ ಉತ್ತರ ನೀಡಿಲ್ಲ. ಎರಡು ದಿನಗಳಲ್ಲಿ ಬೆಂಬಲಿಗರ ಸಭೆ ನಡೆಸಿ ಮುಂದಿನ ರಾಜಕೀಯ ನಿಲುವು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ನನಗೆ ಟಿಕೆಟ್ ನೀಡದ್ದಕ್ಕೆ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ನನಗೆ ಅಧಿಕಾರದ ಆಸೆಯಿಲ್ಲ, ಕಾರ್ಯಕರ್ತರ ಸಲುವಾಗಿ ಸಭೆ ನಡೆಸುತ್ತಿದ್ದೇನೆ. ಕಾಂಗ್ರೆಸ್ ಸೇರಬೇಕೊ, ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕೊ ಅಥವಾ ಬಿಜೆಪಿಯಲ್ಲಿಯೇ ಮುಂದುವರಿಯಬೇಕೊ? ಎನ್ನುವ ಬಗ್ಗೆ ಸಭೆ ನಂತರ ನಿರ್ಧರಿಸುವೆ ಎಂದರು.
ಬಿಜೆಪಿ ಅಭ್ಯರ್ಥಿ ಬಸವರಾಜ ಪರ ಪ್ರಚಾರಕ್ಕೆ ಬರುವಂತೆ ಜಿಲ್ಲೆಯ ಬಿಜೆಪಿ ನಾಯಕರು ಕರೆಯುತ್ತಿದ್ದಾರೆ. ಒಂದು ವೇಳೆ ನಾನು ಪ್ರಚಾರಕ್ಕೆ ಹೋದರೂ ನಾಯಕತ್ವ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.