ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಷ್ಟಗಿ: ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

Published 4 ಜೂನ್ 2024, 16:06 IST
Last Updated 4 ಜೂನ್ 2024, 16:06 IST
ಅಕ್ಷರ ಗಾತ್ರ

ಕುಷ್ಟಗಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಗೆಲುವಿನ ಸೂಚನೆ ದೊರೆಯುತ್ತಿದ್ದಂತೆ ಅನೇಕ ಯುವಕರು ಪಕ್ಷದ ಬಾವುಟ ಹಿಡಿದು ಬೈಕ್‌ ಜಾಥಾ ನಡೆಸಿದರು. ನಿಷೇಧಾಜ್ಞೆ ಕಾರಣಕ್ಕೆ ಆಚರಣೆ ಸರಳವಾಗಿತ್ತು. ನಂತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಇತರೆ ಮುಖಂಡರೊಂದಿಗೆ ಸೇರಿ ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದರು. ಇದೇ ವೇಳೆ ಬಯ್ಯಾಪುರ ಅವರನ್ನು ಸನ್ಮಾನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT