ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆಯ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು (ಗುರುವಾರ) ದಾಳಿ ನಡೆಸಿದ್ದಾರೆ.
ಎರಡು ವರ್ಷಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹದೇವ ಅವರ ಕೊಪ್ಪಳದ ಬಿ.ಟಿ. ಪಾಟೀಲ್ ನಗರದಲ್ಲಿರುವ ಮನೆ, ಜಿಲ್ಲಾಡಳಿತ ಭವನದಲ್ಲಿರುವ ಕೃಷಿ ಇಲಾಖೆ ಕಚೇರಿ ಮೇಲೆ ದಾಳಿ ನಡೆದಿದೆ.
ಸಹದೇವ ಮೂಲತಃ ಗದುಗಿನವರು.
ಗದಗದ ನಿವಾಸದ ಮೇಲೂ ದಾಳಿ ನಡೆದಿದ್ದು ಗದಗಿನ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.