ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ: KRIDL ಅಧಿಕಾರಿ ‌ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಝಡ್.ಎಂ. ಚಿಂಚೋಳಿಕರ್ ಮನೆ ಮೇಲೆ ದಾಳಿ
Published 31 ಮೇ 2023, 4:26 IST
Last Updated 31 ಮೇ 2023, 4:26 IST
ಅಕ್ಷರ ಗಾತ್ರ

ಕೊಪ್ಪಳ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್ ಐಡಿಎಲ್) ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಝಡ್.ಎಂ. ಚಿಂಚೋಳಿಕರ್ ಅವರ ಇಲ್ಲಿನ ಮನೆ ಹಾಗೂ ಕಚೇರಿ‌ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯಕ್ಕಿಂತಲೂ ಹೆಚ್ಚು ಗಳಿಸಿದ ಆರೋಪ ಕೇಳಿ ಬಂದಿದ್ದರಿಂದ ರಾಯಚೂರು ಲೋಕಾಯುಕ್ತದ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಚಿಂಚೋಳಿಕರ್ ಅವರಿಗೆ ಸಂಬಂಧಿಸಿದ ಕಲಬುರಗಿ ಹಾಗು ಬೀದರಿನ ಮನೆಗಳ ಮೇಲೆ ಎಕಕಾಲಕ್ಕೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT