ಕೊಪ್ಪಳ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್ ಐಡಿಎಲ್) ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಝಡ್.ಎಂ. ಚಿಂಚೋಳಿಕರ್ ಅವರ ಇಲ್ಲಿನ ಮನೆ ಹಾಗೂ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯಕ್ಕಿಂತಲೂ ಹೆಚ್ಚು ಗಳಿಸಿದ ಆರೋಪ ಕೇಳಿ ಬಂದಿದ್ದರಿಂದ ರಾಯಚೂರು ಲೋಕಾಯುಕ್ತದ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಚಿಂಚೋಳಿಕರ್ ಅವರಿಗೆ ಸಂಬಂಧಿಸಿದ ಕಲಬುರಗಿ ಹಾಗು ಬೀದರಿನ ಮನೆಗಳ ಮೇಲೆ ಎಕಕಾಲಕ್ಕೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.