<p><strong>ಗಂಗಾವತಿ: </strong>ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ ಸಮ್ಮುಖದಲ್ಲಿ ರೈತರು ಭತ್ತದ ಬಿತ್ತನೆ ಬೀಜ ಕಳಪೆ ಗುಣಮಟ್ಟದಿಂದ ಕೂಡಿರುವುದನ್ನು ಸಾಬೀತುಪಡಿಸಿದರು. ಕೃಷಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕ ಪರಣ್ಣ ಮುನವಳ್ಳಿ ಬಿತ್ತನೆ ಬೀಜ ಪರಿಶೀಲಿಸಿ ಕೃಷಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಮುಂಗಾರು ಹಂಗಾಮಿನಲ್ಲಿ ರೈತರ ಅನುಕೂಲಕ್ಕಾಗಿ ಸರ್ಕಾರ ಶೀಘ್ರ ಬೀಜ ಮತ್ತು ಗೊಬ್ಬರ ವಿತರಿಸಲು ಅವಕಾಶ ನೀಡಿದೆ. ಆದರೆ ಭತ್ತದ ಬೀಜ ಕಳಪೆಯಾಗಿರುವುದನ್ನು ರೈತರು ಗುರುತಿಸಿದ್ದಾರೆ. ಇದು ಕೃಷಿ ಇಲಾಖೆಗೆ ಕಪ್ಪು ಚುಕ್ಕೆಯಾಗಿದೆ’ ಎಂದು ಹೇಳಿದರು.</p>.<p>ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅವರ ಗಮನಕ್ಕೆ ತಂದು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ತಕ್ಷಣ ಕಳಪೆ ಬೀಜ ಬದಲಾಯಿಸಿ ಗುಣಮಟ್ಟದ ಬೀಜ ವಿತರಿಸಬೇಕು ಎಂದು ಸೂಚಿಸಿದರು.</p>.<p>ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಮಾತನಾಡಿ,‘ಬೀಜ ವಿತರಣೆಗೂ ಮುಂಚೆ ಅಧಿಕಾರಿಗಳು ಗಮನಿಸಬೇಕು. ರೈತರು ತಕ್ಷಣ ತೆಗೆದುಕೊಂಡು ಹೋಗಿ ಸಸಿಮಡಿಗೆ ಹಾಕುತ್ತಾರೆ. ಒಂದು ತಿಂಗಳ ನಂತರ ಅವರಿಗೆ ಸಮಸ್ಯೆಯಾಗಿ ಆತಂಕಕ್ಕೀಡಾಗುತ್ತಾರೆ. ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು. ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಜಲಾಶಯಕ್ಕೂ ನೀರು ಬರುತ್ತಿದೆ. ಜುಲೈ ತಿಂಗಳಲ್ಲಿ ನೀರು ಬಿಡುವ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತೇನೆ’ ಎಂದರು.</p>.<p>ನಂತರ ಕೃಷಿ ಅಧಿಕಾರಿ ಸಂತೋಷ ಮಾತನಾಡಿ,‘ಎಲ್ಲವನ್ನು ಪರಿಶೀಲಿಸಲಾಗುತ್ತದೆ. ಇದು ಈಗ ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಇದನ್ನು ಹಿಂದಿರುಗಿಸಲಾಗುವುದು’ ಎಂದರು.</p>.<p>ಪ್ರಮುಖರಾದ ಕಳಕಪ್ಪ, ವಲಿಸಾಬ, ಚಂದ್ರಶೇಖರ ನಾಡಗೌಡ, ನಗರಸಭೆ ಸದಸ್ಯ ರಮೇಶ ಚೌಡ್ಕಿ, ನಗರ ಪ್ರಾಧಿಕಾರ ಅಧ್ಯಕ್ಷ ಮಲ್ಲೇಶಪ್ಪ ಹೊಸಮಲಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಗಿ ಹಾಗೂ ಯಮನೂರಪ್ಪ ಚೌಡ್ಕಿ ಇದ್ದರು.</p>.<p class="Subhead"><strong>ಕಳಪೆ ಬೀಜ ವಿತರಿಸಿದರೆ ಕ್ರಮ:</strong> ಬೀಜ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಕಳಪೆ ಬೀಜ ಪೂರೈಕೆಯಾಗುತ್ತಿರುವುದನ್ನು ರೈತರು ಬಯಲು ಮಾಡುತ್ತಿದ್ದಂತೆ ಎಚ್ಚೆತ್ತ ತಹಶೀಲ್ದಾರ್ ಯು.ನಾಗರಾಜ ಅವರು ಕಳಪೆ ಬೀಜ ಪೂರೈಕೆ ಆಗಿರುವ ಕುರಿತು ಕೃಷಿ ಅಧಿಕಾರಿಗಳು ತಕ್ಷಣ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಗಳಿಗೂ ವರದಿ ಸಲ್ಲಿಸಲಾಗುವುದು. ಕಳಪೆ ಬೀಜ ವಿತರಣೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.</p>.<p><strong>ಪರವಾನಗಿ ಇಲ್ಲದೆ ಬಿತ್ತನೆ ಬೀಜ ಮಾರಾಟ: ದಾಳಿ<br />ಗಂಗಾವತಿ:</strong> ನಗರದ ಮಲ್ಲಿಕಾರ್ಜುನ ಸೀಡ್ ಸೆಂಟರ್ ಮೇಲೆ ಕೃಷಿ ಜಾಗೃತ ದಳದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. </p>.<p>ಪರವಾನಗಿ ಪಡೆಯದೇ ಬೀಜ, ಗೊಬ್ಬರ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರವಾನಗಿ ಇಲ್ಲದೆ ದಾಸ್ತಾನು ಮಾಡಿದ್ದ ₹14 ಲಕ್ಷ ಮೌಲ್ಯದ ಬಿತ್ತನೆ ಬೀಜ ಹಾಗೂ 58 ಕ್ವಿಂಟಲ್ ತೊಗರಿ, ಸಜ್ಜೆ, ಮೆಕ್ಕೆಜೋಳ ವಶಪಡಿಸಿಕೊಳ್ಳಲಾಗಿದೆ.</p>.<p>ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ಜಾಗೃತ ದಳದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಪರಣ್ಣ ಮುನವಳ್ಳಿ ಸಮ್ಮುಖದಲ್ಲಿ ರೈತರು ಭತ್ತದ ಬಿತ್ತನೆ ಬೀಜ ಕಳಪೆ ಗುಣಮಟ್ಟದಿಂದ ಕೂಡಿರುವುದನ್ನು ಸಾಬೀತುಪಡಿಸಿದರು. ಕೃಷಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಸಕ ಪರಣ್ಣ ಮುನವಳ್ಳಿ ಬಿತ್ತನೆ ಬೀಜ ಪರಿಶೀಲಿಸಿ ಕೃಷಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಮುಂಗಾರು ಹಂಗಾಮಿನಲ್ಲಿ ರೈತರ ಅನುಕೂಲಕ್ಕಾಗಿ ಸರ್ಕಾರ ಶೀಘ್ರ ಬೀಜ ಮತ್ತು ಗೊಬ್ಬರ ವಿತರಿಸಲು ಅವಕಾಶ ನೀಡಿದೆ. ಆದರೆ ಭತ್ತದ ಬೀಜ ಕಳಪೆಯಾಗಿರುವುದನ್ನು ರೈತರು ಗುರುತಿಸಿದ್ದಾರೆ. ಇದು ಕೃಷಿ ಇಲಾಖೆಗೆ ಕಪ್ಪು ಚುಕ್ಕೆಯಾಗಿದೆ’ ಎಂದು ಹೇಳಿದರು.</p>.<p>ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅವರ ಗಮನಕ್ಕೆ ತಂದು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ತಕ್ಷಣ ಕಳಪೆ ಬೀಜ ಬದಲಾಯಿಸಿ ಗುಣಮಟ್ಟದ ಬೀಜ ವಿತರಿಸಬೇಕು ಎಂದು ಸೂಚಿಸಿದರು.</p>.<p>ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಮಾತನಾಡಿ,‘ಬೀಜ ವಿತರಣೆಗೂ ಮುಂಚೆ ಅಧಿಕಾರಿಗಳು ಗಮನಿಸಬೇಕು. ರೈತರು ತಕ್ಷಣ ತೆಗೆದುಕೊಂಡು ಹೋಗಿ ಸಸಿಮಡಿಗೆ ಹಾಕುತ್ತಾರೆ. ಒಂದು ತಿಂಗಳ ನಂತರ ಅವರಿಗೆ ಸಮಸ್ಯೆಯಾಗಿ ಆತಂಕಕ್ಕೀಡಾಗುತ್ತಾರೆ. ಈ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು. ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಜಲಾಶಯಕ್ಕೂ ನೀರು ಬರುತ್ತಿದೆ. ಜುಲೈ ತಿಂಗಳಲ್ಲಿ ನೀರು ಬಿಡುವ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತೇನೆ’ ಎಂದರು.</p>.<p>ನಂತರ ಕೃಷಿ ಅಧಿಕಾರಿ ಸಂತೋಷ ಮಾತನಾಡಿ,‘ಎಲ್ಲವನ್ನು ಪರಿಶೀಲಿಸಲಾಗುತ್ತದೆ. ಇದು ಈಗ ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಇದನ್ನು ಹಿಂದಿರುಗಿಸಲಾಗುವುದು’ ಎಂದರು.</p>.<p>ಪ್ರಮುಖರಾದ ಕಳಕಪ್ಪ, ವಲಿಸಾಬ, ಚಂದ್ರಶೇಖರ ನಾಡಗೌಡ, ನಗರಸಭೆ ಸದಸ್ಯ ರಮೇಶ ಚೌಡ್ಕಿ, ನಗರ ಪ್ರಾಧಿಕಾರ ಅಧ್ಯಕ್ಷ ಮಲ್ಲೇಶಪ್ಪ ಹೊಸಮಲಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಗಿ ಹಾಗೂ ಯಮನೂರಪ್ಪ ಚೌಡ್ಕಿ ಇದ್ದರು.</p>.<p class="Subhead"><strong>ಕಳಪೆ ಬೀಜ ವಿತರಿಸಿದರೆ ಕ್ರಮ:</strong> ಬೀಜ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಕಳಪೆ ಬೀಜ ಪೂರೈಕೆಯಾಗುತ್ತಿರುವುದನ್ನು ರೈತರು ಬಯಲು ಮಾಡುತ್ತಿದ್ದಂತೆ ಎಚ್ಚೆತ್ತ ತಹಶೀಲ್ದಾರ್ ಯು.ನಾಗರಾಜ ಅವರು ಕಳಪೆ ಬೀಜ ಪೂರೈಕೆ ಆಗಿರುವ ಕುರಿತು ಕೃಷಿ ಅಧಿಕಾರಿಗಳು ತಕ್ಷಣ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಗಳಿಗೂ ವರದಿ ಸಲ್ಲಿಸಲಾಗುವುದು. ಕಳಪೆ ಬೀಜ ವಿತರಣೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.</p>.<p><strong>ಪರವಾನಗಿ ಇಲ್ಲದೆ ಬಿತ್ತನೆ ಬೀಜ ಮಾರಾಟ: ದಾಳಿ<br />ಗಂಗಾವತಿ:</strong> ನಗರದ ಮಲ್ಲಿಕಾರ್ಜುನ ಸೀಡ್ ಸೆಂಟರ್ ಮೇಲೆ ಕೃಷಿ ಜಾಗೃತ ದಳದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. </p>.<p>ಪರವಾನಗಿ ಪಡೆಯದೇ ಬೀಜ, ಗೊಬ್ಬರ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರವಾನಗಿ ಇಲ್ಲದೆ ದಾಸ್ತಾನು ಮಾಡಿದ್ದ ₹14 ಲಕ್ಷ ಮೌಲ್ಯದ ಬಿತ್ತನೆ ಬೀಜ ಹಾಗೂ 58 ಕ್ವಿಂಟಲ್ ತೊಗರಿ, ಸಜ್ಜೆ, ಮೆಕ್ಕೆಜೋಳ ವಶಪಡಿಸಿಕೊಳ್ಳಲಾಗಿದೆ.</p>.<p>ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ಜಾಗೃತ ದಳದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>