<p><strong>ಕನಕಗಿರಿ:</strong> ‘12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಶರಣರಾಗಿದ್ದ ಮಡಿವಾಳ ಮಾಚಿದೇವ ವಚನಗಳ ರಕ್ಷಕರಾಗಿದ್ದರು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್ ಅಭಿಪ್ರಾಯಪಟ್ಟರು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಡಿವಾಳ ಮಾಚಿದೇವರು ಮಡಿವಂತಿಕೆಗೆ ಮತ್ತೊಂದು ಹೆಸರಾಗಿದ್ದರು ಅವರ ನಡೆ, ನುಡಿ ಹಾಗೂ ಕಾಯಕ ನಿಷ್ಠೆ ಅನುಕರಣೀಯ’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಎಂ. ತಿರುಮಲಮ್ಮ, ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ ಮಾತನಾಡಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಮಹ್ಮದ್ ಪಾಷಾ ಮುಲ್ಲಾರ, ಪ್ರಕಾಶ ಹಾದಿಮನಿ, ಶರಣಪ್ಪ ಕೋಲ್ಕಾರ್, ಪಾಮಣ್ಣ ಹಾಗೂ ಟಿ.ಜೆ. ವಿಜಯಕುಮಾರ ಇದ್ದರು.</p>.<p>ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತಿಪ್ಪಣ್ಣ ಮಡಿವಾಳರ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ರಮೇಶರಡ್ಡಿ ಓಣಿಮನಿ ಹಾಗೂ ಅಮರೇಶ ಪಟ್ಟಣಶೆಟ್ಟಿ<br />ಇದ್ದರು.</p>.<p class="Briefhead"><strong>‘ಶರಣರ ರಕ್ಷಕ’</strong></p>.<p>ಹನುಮಸಾಗರ: ‘ಮಡಿವಾಳ ಮಾಚಿದೇವರು ವಚನ ಸಾಹಿತ್ಯದ ರಕ್ಷಕರಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿದ್ದು, ಕಲ್ಯಾಣದಲ್ಲಿ ಶರಣರ ವಿರುದ್ಧ ಎದ್ದ ದಂಗೆಯ ಸಮಯದಲ್ಲಿ ಹಲವಾರು ಶರಣರನ್ನು ರಕ್ಷಿಸಿದ್ದರು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಭೀಮಣ್ಣ ಅಗಸಿಮುಂದಿನ ಹೇಳಿದರು.</p>.<p>ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಅವರು ಮಾತನಾಡಿದರು.</p>.<p>‘ಸಮಾನತೆ, ಜಾತಿಯತೆ ನಿರ್ಮೂಲನೆ, ಸ್ತ್ರೀ ಸ್ವಾತಂತ್ರ್ಯ ಹನ್ನೆರಡನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಮೂಲ ಉದ್ದೇಶವಾಗಿತ್ತು. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು’<br />ಎಂದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮೂಲಿಮನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಪ್ಪ ಕಂಪ್ಲಿ, ರಿಯಾಜ್ ಖಾಜಿ, ರಮೇಶ ಬಡಿಗೇರ, ಮರೇಗೌಡ ಬೋದೂರ, ಫಾರೂಕ್ ಡಲಾಯಿತ್ ಹಾಗೂ ಶ್ರೀಶೈಲ ಮೋಟಗಿ ಇದ್ದರು.</p>.<p class="Briefhead"><strong>ಮಹಾ ಶರಣರಿಗೆ ಗೌರವ</strong></p>.<p><strong>ತಾವರಗೇರಾ: </strong>ಪಟ್ಟಣದ ಸರ್ಕಾರಿ ಕಚೇರಿಗಳು ಮತ್ತು ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಸೋಮವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಜಯಂತಿ ಆಚರಿಸಲಾಯಿತು.</p>.<p>ಮುಖ್ಯಾಧಿಕಾರಿ ಶಂಕರ ಕಾಳೆ, ಶರಣಬಸವ ಸೈಂದರ್, ಶಾಮೂರ್ತಿ ಕಟ್ಟಿಮನಿ, ಸುವರ್ಣ,ಮರೇಶ ಹಾಗೂ ಶಾರದಾ ಇದ್ದರು.</p>.<p><strong>ನಾಡ ಕಚೇರಿ: </strong>ಇಲ್ಲಿನ ನಾಡ ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಹೂ ಮಾಲೆ ಹಾಕಿ, ಪೂಜೆ ನೆರವೇರಿಸುವ ಮೂಲಕ ಜಯಂತಿ ಆಚರಿಸಲಾಯಿತು.</p>.<p>ನಾಡ ತಹಶೀಲ್ದಾರ್ ಮಂಜುಳಾ ಪತ್ತಾರ, ಸೂರ್ಯಕಾಂತ ನಾಯಕ್, ಸಮಾಜದ ಮುಖಂಡರು, ಸಿಬ್ಬಂದಿ ಇದ್ದರು. ಪಟ್ಟಣ ಮತ್ತು ಸುತ್ತಲಿನ ವಿವಿಧ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮಡಿವಾಳ ಮಾಚಿದೇವರ ಜಯಂತಿಆಚರಿಸಲಾಯಿತು.</p>.<p class="Briefhead"><strong>ಸರಳ ಆಚರಣೆ</strong></p>.<p><strong>ಕುಷ್ಟಗಿ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ ಶರಣ ಮಡಿವಾಳ ಮಾಚಿದೇವ ಜಯಂತಿಯನ್ನು ಕೋವಿಡ್ ನಿಯಮಗಳ ಅನುಸಾರ ಸರಳ ರೀತಿಯಲ್ಲಿ ಆಚರಿಸಲಾಯಿತು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಂ.ಸಿದ್ದೇಶ್ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಪೂಜೆ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ಮತ್ತು ಸದಸ್ಯರು, ಗ್ರೇಡ್–2 ತಹಶೀಲ್ದಾರ್ ಮುರಳೀಧರ, ಶಿರಸ್ತೆದಾರ ಸತೀಶ್, ಕಾಂಗ್ರೆಸ್ ಮುಖಂಡ ದೊಡ್ಡಬಸವನಗೌಡ ಬಯ್ಯಾಪುರ ಸೇರಿದಂತೆ ಅನೇಕ ಪ್ರಮುಖರು, ತಾಲ್ಲೂಕಿನ ವಿವಿಧ ಗ್ರಾಮಗಳ ಮಡಿವಾಳ ಸಮುದಾಯದ ಮುಖಂಡರು, ಯುವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ಅದೇ ರೀತಿ ಪುರಸಭೆ, ತಾಲ್ಲೂಕು ಪಂಚಾಯಿತಿ, ಎಪಿಎಂಸಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.</p>.<p>ಬುತ್ತಿಬಸವೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೂ ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.</p>.<p>ವಚನ ಸಾಹಿತ್ಯ ಕುರಿತು ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ‘12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಶರಣರಾಗಿದ್ದ ಮಡಿವಾಳ ಮಾಚಿದೇವ ವಚನಗಳ ರಕ್ಷಕರಾಗಿದ್ದರು’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್ ಅಭಿಪ್ರಾಯಪಟ್ಟರು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಡಿವಾಳ ಮಾಚಿದೇವರು ಮಡಿವಂತಿಕೆಗೆ ಮತ್ತೊಂದು ಹೆಸರಾಗಿದ್ದರು ಅವರ ನಡೆ, ನುಡಿ ಹಾಗೂ ಕಾಯಕ ನಿಷ್ಠೆ ಅನುಕರಣೀಯ’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಎಂ. ತಿರುಮಲಮ್ಮ, ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ ಮಾತನಾಡಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯ ಮಹ್ಮದ್ ಪಾಷಾ ಮುಲ್ಲಾರ, ಪ್ರಕಾಶ ಹಾದಿಮನಿ, ಶರಣಪ್ಪ ಕೋಲ್ಕಾರ್, ಪಾಮಣ್ಣ ಹಾಗೂ ಟಿ.ಜೆ. ವಿಜಯಕುಮಾರ ಇದ್ದರು.</p>.<p>ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ತಿಪ್ಪಣ್ಣ ಮಡಿವಾಳರ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ರಮೇಶರಡ್ಡಿ ಓಣಿಮನಿ ಹಾಗೂ ಅಮರೇಶ ಪಟ್ಟಣಶೆಟ್ಟಿ<br />ಇದ್ದರು.</p>.<p class="Briefhead"><strong>‘ಶರಣರ ರಕ್ಷಕ’</strong></p>.<p>ಹನುಮಸಾಗರ: ‘ಮಡಿವಾಳ ಮಾಚಿದೇವರು ವಚನ ಸಾಹಿತ್ಯದ ರಕ್ಷಕರಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿದ್ದು, ಕಲ್ಯಾಣದಲ್ಲಿ ಶರಣರ ವಿರುದ್ಧ ಎದ್ದ ದಂಗೆಯ ಸಮಯದಲ್ಲಿ ಹಲವಾರು ಶರಣರನ್ನು ರಕ್ಷಿಸಿದ್ದರು’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಭೀಮಣ್ಣ ಅಗಸಿಮುಂದಿನ ಹೇಳಿದರು.</p>.<p>ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆಸಲ್ಲಿಸಿ ಅವರು ಮಾತನಾಡಿದರು.</p>.<p>‘ಸಮಾನತೆ, ಜಾತಿಯತೆ ನಿರ್ಮೂಲನೆ, ಸ್ತ್ರೀ ಸ್ವಾತಂತ್ರ್ಯ ಹನ್ನೆರಡನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಮೂಲ ಉದ್ದೇಶವಾಗಿತ್ತು. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು’<br />ಎಂದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಮೂಲಿಮನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಪ್ಪ ಕಂಪ್ಲಿ, ರಿಯಾಜ್ ಖಾಜಿ, ರಮೇಶ ಬಡಿಗೇರ, ಮರೇಗೌಡ ಬೋದೂರ, ಫಾರೂಕ್ ಡಲಾಯಿತ್ ಹಾಗೂ ಶ್ರೀಶೈಲ ಮೋಟಗಿ ಇದ್ದರು.</p>.<p class="Briefhead"><strong>ಮಹಾ ಶರಣರಿಗೆ ಗೌರವ</strong></p>.<p><strong>ತಾವರಗೇರಾ: </strong>ಪಟ್ಟಣದ ಸರ್ಕಾರಿ ಕಚೇರಿಗಳು ಮತ್ತು ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಸೋಮವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಜಯಂತಿ ಆಚರಿಸಲಾಯಿತು.</p>.<p>ಮುಖ್ಯಾಧಿಕಾರಿ ಶಂಕರ ಕಾಳೆ, ಶರಣಬಸವ ಸೈಂದರ್, ಶಾಮೂರ್ತಿ ಕಟ್ಟಿಮನಿ, ಸುವರ್ಣ,ಮರೇಶ ಹಾಗೂ ಶಾರದಾ ಇದ್ದರು.</p>.<p><strong>ನಾಡ ಕಚೇರಿ: </strong>ಇಲ್ಲಿನ ನಾಡ ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಹೂ ಮಾಲೆ ಹಾಕಿ, ಪೂಜೆ ನೆರವೇರಿಸುವ ಮೂಲಕ ಜಯಂತಿ ಆಚರಿಸಲಾಯಿತು.</p>.<p>ನಾಡ ತಹಶೀಲ್ದಾರ್ ಮಂಜುಳಾ ಪತ್ತಾರ, ಸೂರ್ಯಕಾಂತ ನಾಯಕ್, ಸಮಾಜದ ಮುಖಂಡರು, ಸಿಬ್ಬಂದಿ ಇದ್ದರು. ಪಟ್ಟಣ ಮತ್ತು ಸುತ್ತಲಿನ ವಿವಿಧ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮಡಿವಾಳ ಮಾಚಿದೇವರ ಜಯಂತಿಆಚರಿಸಲಾಯಿತು.</p>.<p class="Briefhead"><strong>ಸರಳ ಆಚರಣೆ</strong></p>.<p><strong>ಕುಷ್ಟಗಿ:</strong> ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ ಶರಣ ಮಡಿವಾಳ ಮಾಚಿದೇವ ಜಯಂತಿಯನ್ನು ಕೋವಿಡ್ ನಿಯಮಗಳ ಅನುಸಾರ ಸರಳ ರೀತಿಯಲ್ಲಿ ಆಚರಿಸಲಾಯಿತು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಂ.ಸಿದ್ದೇಶ್ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಪೂಜೆ ಸಲ್ಲಿಸಿದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ಮತ್ತು ಸದಸ್ಯರು, ಗ್ರೇಡ್–2 ತಹಶೀಲ್ದಾರ್ ಮುರಳೀಧರ, ಶಿರಸ್ತೆದಾರ ಸತೀಶ್, ಕಾಂಗ್ರೆಸ್ ಮುಖಂಡ ದೊಡ್ಡಬಸವನಗೌಡ ಬಯ್ಯಾಪುರ ಸೇರಿದಂತೆ ಅನೇಕ ಪ್ರಮುಖರು, ತಾಲ್ಲೂಕಿನ ವಿವಿಧ ಗ್ರಾಮಗಳ ಮಡಿವಾಳ ಸಮುದಾಯದ ಮುಖಂಡರು, ಯುವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ಅದೇ ರೀತಿ ಪುರಸಭೆ, ತಾಲ್ಲೂಕು ಪಂಚಾಯಿತಿ, ಎಪಿಎಂಸಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.</p>.<p>ಬುತ್ತಿಬಸವೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೂ ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.</p>.<p>ವಚನ ಸಾಹಿತ್ಯ ಕುರಿತು ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>