ಆಟೊ ಚಾಲಕನಾಗಿದ್ದ ಈತ, ಸಹಚರ ಇಮ್ರಾನ್ ಪಾಷಾ ಎಂಬಾತನೊಂದಿಗೆ ಸೇರಿಕೊಂಡು ಕೃತ್ಯ ಎಸಗುತ್ತಿದ್ದ. ಆರೋಪಿಯ ಬಂಧನದಿಂದ ರಾಮಮೂರ್ತಿನಗರ, ಹೆಣ್ಣೂರು, ಬಾಣಸವಾಡಿ ಹಾಗೂ ನಂದಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 7 ಸರಗಳವು ಪ್ರಕರಣಗಳು ಪತ್ತೆಯಾಗಿವೆ. ₹10 ಲಕ್ಷ ಮೌಲ್ಯದ ಚಿನ್ನದ ಆಭರಣ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದೇವೆ ಎಂದರು.