<p><strong>ಗಂಗಾವತಿ: </strong>ಮಕರ ಸಂಕ್ರಾಂತಿ ಹಿನ್ನೆಲೆ ಸಂಕ್ರಾಂತಿಯ ಮುನ್ನಾದಿನ ನಗರದ ಅಕ್ಷರ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಬೋಗಿ ಆಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.</p>.<p>ಶಾಲೆಯ ಶಿಕ್ಷಕರು ಸೇರಿದಂತೆ ಮಕ್ಕಳು ಕೂಡ ಹಳ್ಳಿಯ ವೇಷಭೂಷಣಗಳಲ್ಲಿ ಕಂಗೊಳಿಸಿದರು.</p>.<p>ಬಳಿಕ ಶಾಲಾ ಆವರಣದಲ್ಲಿ ಬೆರಣಿಗಳನ್ನು ಸುಡುವ ಮೂಲಕ ಹಾಲು ಉಕ್ಕಿಸಿ ಹಬ್ಬವನ್ನು ಆಚರಣೆ ಮಾಡಲಾಯಿತು.</p>.<p>ಈ ವೇಳೆ ಸಂಕ್ರಾತಿಯ ಚಿತ್ರಗೀತೆಗಳಿಗೆ ಶಿಕ್ಷಕಿಯರು ಮತ್ತು ಮಕ್ಕಳು ಹೆಜ್ಜೆ ಹಾಕಿದರು. ಈ ವೇಳೆ ಸಂಸ್ಥೆಯ ನಿರ್ದೇಶಕ ರವಿಚೈತನ್ಯ ರೆಡ್ಡಿ, ಪ್ರಾಂಶುಪಾಲರಾದ ಎಸ್.ಹೀಮಾ ಹಾಗೂ ಶಿಕ್ಷಕಿಯರು ಇದ್ದರು.</p>.<p><strong>ಚಿಣ್ಣರ ಕೆಸರು ಗದ್ದೆ ಓಟ:</strong> ಇನ್ನು, ಜಯನಗರದ ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ವಿಭಿನ್ನವಾಗಿ ಆಚರಣೆ ಮಾಡಲಾಯಿತು.</p>.<p>ಮಕ್ಕಳಿಗಾಗಿಯೇ ಕೆಸರು ಗದ್ದೆ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಎಲ್.ಕೆ.ಜಿ, ಯು.ಕೆ.ಜಿ ಸೇರಿದಂತೆ ಒಂದರಿಂದ 7ನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಕೆಸರು ಗದ್ದೆ ಓಟದಲ್ಲಿ ಉತ್ಸಾಹದಲ್ಲಿ ಪಾಲ್ಗೊಂಡರು. ಇದರ ಜತೆ ಪಾಲಕರನ್ನು ಕೆಸರುಗದ್ದೆಯಲ್ಲಿ ಓಡಿಸಲಾಯಿತು.</p>.<p>ಸಂಸ್ಥೆಯ ಮುಖ್ಯಸ್ಥ ನೇತ್ರಾಜ್ ಗುರುವಿನಮಠ, ಪ್ರಾಚಾರ್ಯರಾದ ಸವಿತಾ, ಶಿಕ್ಷಕಿಯರಾದ ದೀಪಾ, ರೇಣುಕಾ, ಶ್ವೇತಾ, ಪ್ರತೀಕಾ, ಸೌಜನ್ಯ, ಪವಿತ್ರ, ವೀರಮ್ಮ, ರಾಗಿಣಿ, ಬಸಮ್ಮ, ಜಯಶ್ರೀ ಹಾಗೂ ಮಕ್ಕಳ ಪೋಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಮಕರ ಸಂಕ್ರಾಂತಿ ಹಿನ್ನೆಲೆ ಸಂಕ್ರಾಂತಿಯ ಮುನ್ನಾದಿನ ನಗರದ ಅಕ್ಷರ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಬೋಗಿ ಆಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.</p>.<p>ಶಾಲೆಯ ಶಿಕ್ಷಕರು ಸೇರಿದಂತೆ ಮಕ್ಕಳು ಕೂಡ ಹಳ್ಳಿಯ ವೇಷಭೂಷಣಗಳಲ್ಲಿ ಕಂಗೊಳಿಸಿದರು.</p>.<p>ಬಳಿಕ ಶಾಲಾ ಆವರಣದಲ್ಲಿ ಬೆರಣಿಗಳನ್ನು ಸುಡುವ ಮೂಲಕ ಹಾಲು ಉಕ್ಕಿಸಿ ಹಬ್ಬವನ್ನು ಆಚರಣೆ ಮಾಡಲಾಯಿತು.</p>.<p>ಈ ವೇಳೆ ಸಂಕ್ರಾತಿಯ ಚಿತ್ರಗೀತೆಗಳಿಗೆ ಶಿಕ್ಷಕಿಯರು ಮತ್ತು ಮಕ್ಕಳು ಹೆಜ್ಜೆ ಹಾಕಿದರು. ಈ ವೇಳೆ ಸಂಸ್ಥೆಯ ನಿರ್ದೇಶಕ ರವಿಚೈತನ್ಯ ರೆಡ್ಡಿ, ಪ್ರಾಂಶುಪಾಲರಾದ ಎಸ್.ಹೀಮಾ ಹಾಗೂ ಶಿಕ್ಷಕಿಯರು ಇದ್ದರು.</p>.<p><strong>ಚಿಣ್ಣರ ಕೆಸರು ಗದ್ದೆ ಓಟ:</strong> ಇನ್ನು, ಜಯನಗರದ ಮಹಾನ್ ಕಿಡ್ಸ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ವಿಭಿನ್ನವಾಗಿ ಆಚರಣೆ ಮಾಡಲಾಯಿತು.</p>.<p>ಮಕ್ಕಳಿಗಾಗಿಯೇ ಕೆಸರು ಗದ್ದೆ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಎಲ್.ಕೆ.ಜಿ, ಯು.ಕೆ.ಜಿ ಸೇರಿದಂತೆ ಒಂದರಿಂದ 7ನೇ ತರಗತಿಯವರೆಗಿನ ಎಲ್ಲಾ ಮಕ್ಕಳು ಕೆಸರು ಗದ್ದೆ ಓಟದಲ್ಲಿ ಉತ್ಸಾಹದಲ್ಲಿ ಪಾಲ್ಗೊಂಡರು. ಇದರ ಜತೆ ಪಾಲಕರನ್ನು ಕೆಸರುಗದ್ದೆಯಲ್ಲಿ ಓಡಿಸಲಾಯಿತು.</p>.<p>ಸಂಸ್ಥೆಯ ಮುಖ್ಯಸ್ಥ ನೇತ್ರಾಜ್ ಗುರುವಿನಮಠ, ಪ್ರಾಚಾರ್ಯರಾದ ಸವಿತಾ, ಶಿಕ್ಷಕಿಯರಾದ ದೀಪಾ, ರೇಣುಕಾ, ಶ್ವೇತಾ, ಪ್ರತೀಕಾ, ಸೌಜನ್ಯ, ಪವಿತ್ರ, ವೀರಮ್ಮ, ರಾಗಿಣಿ, ಬಸಮ್ಮ, ಜಯಶ್ರೀ ಹಾಗೂ ಮಕ್ಕಳ ಪೋಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>