<p><strong>ಕೊಪ್ಪಳ</strong>: ‘ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಮತ್ತು ಧನ್ ಧಾನ್ಯ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿ ರೈತರು ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ಮೆತಗಲ್ನಲ್ಲಿ ನಿರ್ಮಲಾ ಸೀತರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಬಾರ್ಡ್ ಮೂಲಕ ನಿರ್ಮಿಸಲಾದ ಕೃಷಿ ಸಂಸ್ಕರಣಾ ತರಬೇತಿ ಘಟಕ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಬುಧವಾರ ಮಾತನಾಡಿದರು.</p>.<p>‘ವೋಕಲ್ ಫಾರ್ ಲೋಕಲ್’ ಎನ್ನುವುದು ಪ್ರಧಾನಿ ಅವರ ಆಶಯವಾಗಿದ್ದು, ಅದರಂತೆ ಸಂಸ್ಕರಣೆ ಮೂಲಕ ಹಣ್ಣುಗಳ ಮೌಲ್ಯವರ್ಧನೆ ಮಾಡಿ ಬೆಲೆ ಹೆಚ್ಚಿಸುವ ಕೌಶಲವನ್ನು ರೈತರು ರೂಢಿಸಿಕೊಳ್ಳಬೇಕು’ ಎಂದರು.</p>.<p>ಕಿರು ಉದ್ಯಮಗಳ ಮೂಲಕ ಪ್ರಗತಿ ಕಾಣುತ್ತಿರುವ ಕೊಪ್ಪಳ ಜಿಲ್ಲೆ ಉತ್ತರ ಕರ್ನಾಟಕಕ್ಕೆ ‘ಅಕ್ಷಯಪಪಾತ್ರೆ’ ಆಗಿದೆ. ಜಿಎಸ್ಟಿ ತೆರಿಗೆ ಇಳಿತವು ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟರು.</p>.<p>‘ಕೇಂದ್ರ ಸರ್ಕಾರ ಐದು ವರ್ಷಗಳಲ್ಲಿ ರೈತರ ಅನುಕೂಲಕ್ಕಾಗಿ ವಿವಿಧ ರಾಜ್ಯಗಳಿಗೆ ₹3,700 ಕೋಟಿಗೂ ಹೆಚ್ಚು ಹಣ ನೀಡಿದೆ. ₹11 ಸಾವಿರ ಕೋಟಿ ಸಾಲಸೌಲಭ್ಯ ಒದಗಿಸಿದೆ. ಧನ್ ಧಾನ್ಯ ಕೃಷಿ ಯೋಜನೆಗಾಗಿ 2025–26ರ ಬಜೆಟ್ನಲ್ಲಿ ₹24 ಸಾವಿರ ಕೋಟಿ ಹಂಚಿಕೆ ಮಾಡಿ, ಇದಕ್ಕೆ ದೇಶದ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೊಪ್ಪಳ ಜಿಲ್ಲೆಯೂ ಒಂದು’ ಎಂದು ಹೇಳಿದರು.</p>.<p>ಶಾಸಕ ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ರಾಜ್ಯ ಸರ್ಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿ ವಿಶಾಲ್ ಆರ್., ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಮತ್ತು ಧನ್ ಧಾನ್ಯ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿ ರೈತರು ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ಮೆತಗಲ್ನಲ್ಲಿ ನಿರ್ಮಲಾ ಸೀತರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಬಾರ್ಡ್ ಮೂಲಕ ನಿರ್ಮಿಸಲಾದ ಕೃಷಿ ಸಂಸ್ಕರಣಾ ತರಬೇತಿ ಘಟಕ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಬುಧವಾರ ಮಾತನಾಡಿದರು.</p>.<p>‘ವೋಕಲ್ ಫಾರ್ ಲೋಕಲ್’ ಎನ್ನುವುದು ಪ್ರಧಾನಿ ಅವರ ಆಶಯವಾಗಿದ್ದು, ಅದರಂತೆ ಸಂಸ್ಕರಣೆ ಮೂಲಕ ಹಣ್ಣುಗಳ ಮೌಲ್ಯವರ್ಧನೆ ಮಾಡಿ ಬೆಲೆ ಹೆಚ್ಚಿಸುವ ಕೌಶಲವನ್ನು ರೈತರು ರೂಢಿಸಿಕೊಳ್ಳಬೇಕು’ ಎಂದರು.</p>.<p>ಕಿರು ಉದ್ಯಮಗಳ ಮೂಲಕ ಪ್ರಗತಿ ಕಾಣುತ್ತಿರುವ ಕೊಪ್ಪಳ ಜಿಲ್ಲೆ ಉತ್ತರ ಕರ್ನಾಟಕಕ್ಕೆ ‘ಅಕ್ಷಯಪಪಾತ್ರೆ’ ಆಗಿದೆ. ಜಿಎಸ್ಟಿ ತೆರಿಗೆ ಇಳಿತವು ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟರು.</p>.<p>‘ಕೇಂದ್ರ ಸರ್ಕಾರ ಐದು ವರ್ಷಗಳಲ್ಲಿ ರೈತರ ಅನುಕೂಲಕ್ಕಾಗಿ ವಿವಿಧ ರಾಜ್ಯಗಳಿಗೆ ₹3,700 ಕೋಟಿಗೂ ಹೆಚ್ಚು ಹಣ ನೀಡಿದೆ. ₹11 ಸಾವಿರ ಕೋಟಿ ಸಾಲಸೌಲಭ್ಯ ಒದಗಿಸಿದೆ. ಧನ್ ಧಾನ್ಯ ಕೃಷಿ ಯೋಜನೆಗಾಗಿ 2025–26ರ ಬಜೆಟ್ನಲ್ಲಿ ₹24 ಸಾವಿರ ಕೋಟಿ ಹಂಚಿಕೆ ಮಾಡಿ, ಇದಕ್ಕೆ ದೇಶದ 100 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಕೊಪ್ಪಳ ಜಿಲ್ಲೆಯೂ ಒಂದು’ ಎಂದು ಹೇಳಿದರು.</p>.<p>ಶಾಸಕ ಜನಾರ್ದನ ರೆಡ್ಡಿ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ರಾಜ್ಯ ಸರ್ಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿ ವಿಶಾಲ್ ಆರ್., ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>