<p><strong>ಗಂಗಾವತಿ</strong>: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಅಪೌಷ್ಟಿಕ ಮಕ್ಕಳ ಚಿಕಿತ್ಸಾ ಶಿಬಿರ ನಡೆಯಿತು.</p>.<p>ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಲಕ್ಷ್ಮಿದೇವಿ ಗೋಟೂರು ಮಾತನಾಡಿ,‘ಅಪೌಷ್ಟಿಕತೆ ನಿವಾರಣೆ ಮಾಡುವ ಉದ್ದೇಶದಿಂದ ಮಗು ತಾಯಿಯ ಗರ್ಭದಲ್ಲಿ ಇರುವಾಗಲೇ ಪೌಷ್ಟಿಕ ಆಹಾರ ಸಾಮಗ್ರಿ ನೀಡಲಾಗುತ್ತದೆ. ಜನನದ ಬಳಿಕ ಮಗುವಿನ ಬೆಳವಣಿಗೆಗೆ ಅನುಗುಣವಾಗಿ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ಇದೆಲ್ಲದರ ನಂತರದಲ್ಲಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಕಂಡು ಬಂದರೆ ಅಂಥ ಮಕ್ಕಳಿಗೆ ಇಲಾಖೆ ವತಿಯಿಂದ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸಿ, ಉಚಿತ ಔಷಧವನ್ನೂ ವಿತರಣೆ ಮಾಡಲಾಗುತ್ತದೆ. ಸದ್ಯ ಗ್ರಾಮೀಣ ಭಾಗದ 42 ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ’ ಎಂದು ಹೇಳಿದರು.</p>.<p>ಡಾ.ಶ್ರೀಕಾಂತ, ಅಂಗನವಾಡಿ ಮೇಲ್ವಿಚಾರಕಿ ಸಾವಿತ್ರಿ, ಹುಸೇನಮ್ಮ, ಪದ್ಮಾವತಿ ಹಾಗೂ ಗುರುಲಿಂಗಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಅಪೌಷ್ಟಿಕ ಮಕ್ಕಳ ಚಿಕಿತ್ಸಾ ಶಿಬಿರ ನಡೆಯಿತು.</p>.<p>ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಲಕ್ಷ್ಮಿದೇವಿ ಗೋಟೂರು ಮಾತನಾಡಿ,‘ಅಪೌಷ್ಟಿಕತೆ ನಿವಾರಣೆ ಮಾಡುವ ಉದ್ದೇಶದಿಂದ ಮಗು ತಾಯಿಯ ಗರ್ಭದಲ್ಲಿ ಇರುವಾಗಲೇ ಪೌಷ್ಟಿಕ ಆಹಾರ ಸಾಮಗ್ರಿ ನೀಡಲಾಗುತ್ತದೆ. ಜನನದ ಬಳಿಕ ಮಗುವಿನ ಬೆಳವಣಿಗೆಗೆ ಅನುಗುಣವಾಗಿ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ಇದೆಲ್ಲದರ ನಂತರದಲ್ಲಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಕಂಡು ಬಂದರೆ ಅಂಥ ಮಕ್ಕಳಿಗೆ ಇಲಾಖೆ ವತಿಯಿಂದ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸಿ, ಉಚಿತ ಔಷಧವನ್ನೂ ವಿತರಣೆ ಮಾಡಲಾಗುತ್ತದೆ. ಸದ್ಯ ಗ್ರಾಮೀಣ ಭಾಗದ 42 ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ’ ಎಂದು ಹೇಳಿದರು.</p>.<p>ಡಾ.ಶ್ರೀಕಾಂತ, ಅಂಗನವಾಡಿ ಮೇಲ್ವಿಚಾರಕಿ ಸಾವಿತ್ರಿ, ಹುಸೇನಮ್ಮ, ಪದ್ಮಾವತಿ ಹಾಗೂ ಗುರುಲಿಂಗಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>