<p><strong>ಕೊಪ್ಪಳ:</strong> ಹೊಲದ ಮನೆಯಲ್ಲಿ ಕಟ್ಟಿದ್ದ ಜಾನುವಾರುಗಳನ್ನು ನೋಡಿಕೊಂಡು ಬರಲು ಹೋಗಿದ್ದ ವೇಳೆ ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿದೆ.</p><p>ಬುಧವಾರ ರಾತ್ರಿ 10.30ರ ಸುಮಾರಿಗೆ ಈ ದಾಳಿ ನಡೆದಿದ್ದು, ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದ 45 ವರ್ಷದ ಕರಿ ಹನುಮಪ್ಪ ಕುರಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ ಹಾಗೂ ಕುತ್ತಿಗೆಗೆ ಗಾಯಗಳಾಗಿದ್ದು, ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಇಂದರಗಿ ಗ್ರಾಮ ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. ಈ ಭಾಗದ ಪ್ರಮುಖ ರಾಜಕೀಯ ನಾಯಕ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಆಸ್ಪತ್ರೆಗೆ ಭೇಟಿ ನೀಡಿ ಕರಿ ಹನುಮಪ್ಪ ಅವರ ಆರೋಗ್ಯ ವಿಚಾರಿಸಿದರು.</p><p>ಬಳಿಕ ಪ್ರಜಾವಾಣಿ ಜೊತೆ ಮಾತನಾಡಿ ’ಹನುಮಪ್ಪ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಒಂದೆರೆಡು ದಿನ ಇಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ. ಆಗಲೂ ಗುಣಮುಖರಾಗದಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಊರಿಗೆ ಕರೆದುಕೊಂಡು ಹೋಗಲಾಗುವುದು’ ಎಂದು ಹೇಳಿದರು.</p><p><strong>ಈಡೇರದ ಬೇಡಿಕೆ:</strong> ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಕರಡಿಗಳ ಹಾವಳಿ ವ್ಯಾಪಕವಾಗಿದ್ದು, ಮೇಲಿಂದ ಮೇಲೆ ದಾಳಿಯ ಪ್ರಕರಣಗಳು ವರದಿಯಾಗುತ್ತಲೇ ಇವೆ. ಆದ್ದರಿಂದ ಕರಡಿ ಧಾಮ ಆರಂಭಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.</p><p>‘ಕರಡಿ ಧಾಮ ಆರಂಭಿಸಬೇಕೆಂಬ ನಮ್ಮ ಭಾಗದ ಜನರ ಬೇಡಿಕೆಗೆ ಮನ್ನಣೆ ಸಿಕ್ಕಿಲ್ಲ. ಈ ಬೇಡಿಕೆ ಈಡೇರಿಸುವಂತೆ ನಮ್ಮ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರಲ್ಲಿ ಮನವಿ ಮಾಡಿದ್ದೇನೆ. ಅಲ್ಲಿಯೂ ಬೇಡಿಕೆ ಈಡೇರದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಹೊಲದ ಮನೆಯಲ್ಲಿ ಕಟ್ಟಿದ್ದ ಜಾನುವಾರುಗಳನ್ನು ನೋಡಿಕೊಂಡು ಬರಲು ಹೋಗಿದ್ದ ವೇಳೆ ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿದೆ.</p><p>ಬುಧವಾರ ರಾತ್ರಿ 10.30ರ ಸುಮಾರಿಗೆ ಈ ದಾಳಿ ನಡೆದಿದ್ದು, ಕೊಪ್ಪಳ ತಾಲ್ಲೂಕಿನ ಇಂದರಗಿ ಗ್ರಾಮದ 45 ವರ್ಷದ ಕರಿ ಹನುಮಪ್ಪ ಕುರಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಲೆ ಹಾಗೂ ಕುತ್ತಿಗೆಗೆ ಗಾಯಗಳಾಗಿದ್ದು, ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಇಂದರಗಿ ಗ್ರಾಮ ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಬರುತ್ತದೆ. ಈ ಭಾಗದ ಪ್ರಮುಖ ರಾಜಕೀಯ ನಾಯಕ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಆಸ್ಪತ್ರೆಗೆ ಭೇಟಿ ನೀಡಿ ಕರಿ ಹನುಮಪ್ಪ ಅವರ ಆರೋಗ್ಯ ವಿಚಾರಿಸಿದರು.</p><p>ಬಳಿಕ ಪ್ರಜಾವಾಣಿ ಜೊತೆ ಮಾತನಾಡಿ ’ಹನುಮಪ್ಪ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಒಂದೆರೆಡು ದಿನ ಇಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ. ಆಗಲೂ ಗುಣಮುಖರಾಗದಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಊರಿಗೆ ಕರೆದುಕೊಂಡು ಹೋಗಲಾಗುವುದು’ ಎಂದು ಹೇಳಿದರು.</p><p><strong>ಈಡೇರದ ಬೇಡಿಕೆ:</strong> ಇರಕಲ್ಲಗಡ ಹೋಬಳಿ ವ್ಯಾಪ್ತಿಯಲ್ಲಿ ಕರಡಿಗಳ ಹಾವಳಿ ವ್ಯಾಪಕವಾಗಿದ್ದು, ಮೇಲಿಂದ ಮೇಲೆ ದಾಳಿಯ ಪ್ರಕರಣಗಳು ವರದಿಯಾಗುತ್ತಲೇ ಇವೆ. ಆದ್ದರಿಂದ ಕರಡಿ ಧಾಮ ಆರಂಭಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇದೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.</p><p>‘ಕರಡಿ ಧಾಮ ಆರಂಭಿಸಬೇಕೆಂಬ ನಮ್ಮ ಭಾಗದ ಜನರ ಬೇಡಿಕೆಗೆ ಮನ್ನಣೆ ಸಿಕ್ಕಿಲ್ಲ. ಈ ಬೇಡಿಕೆ ಈಡೇರಿಸುವಂತೆ ನಮ್ಮ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರಲ್ಲಿ ಮನವಿ ಮಾಡಿದ್ದೇನೆ. ಅಲ್ಲಿಯೂ ಬೇಡಿಕೆ ಈಡೇರದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>