‘ಬ್ಯಾಂಕ್ನಲ್ಲಿ ರೈತರು ಕೃಷಿಗೆ ಸಂಬಂಧಿಸಿದ ಸಾಲ ಪಡೆದುಕೊಂಡಿದ್ದು ಬ್ಯಾಂಕ್ನವರು ಅಸಲಿನ ಮೇಲೆ ಬಡ್ಡಿ, ಚಕ್ರಬಡ್ಡಿ, ಸುಸ್ತಿ ಬಡ್ಡಿ ಸೇರಿದಂತೆ ಅನೇಕ ಖರ್ಚು ವಿಧಿಸಿದ್ದಾರೆ. ಪಡೆದ ಸಾಲಕ್ಕಿಂತ ಈಗ ಹತ್ತು ಪಟ್ಟು ಹೆಚ್ಚು ಹಣ ಕಟ್ಟಬೇಕಾದ ಸ್ಥಿತಿ ಎದುರಾಗಿದ್ದು, ಇದರಿಂದ ರೈತರು ಕಂಗಲಾಗಿದ್ದಾರೆ. ಕೆಲ ರಾಷ್ಟ್ರೀಕೃತ ಬ್ಯಾಂಕ್ಗಳು ಪಡೆದ ಸಾಲದಲ್ಲಿ ಶೇ. 10ರಷ್ಟನ್ನು ಮಾತ್ರ ಪಾವತಿಸುವ ರೈತಸ್ನೇಹಿ ಯೋಜನೆ ಜಾರಿಗೊಳಿಸಿ ಮಾನವೀಯತೆ ಮೆರೆದಿವೆ. ಆದರೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ರೈತ ಸ್ನೇಹಿ ಯೋಜನೆ ಜಾರಿಗೊಳಿಸದೆ ರೈತರ ಹೊರಯನ್ನು ಮತ್ತಷ್ಟು ಜಾಸ್ತಿ ಮಾಡುತ್ತಿದೆ. ರೈತರಿಗೆ ನ್ಯಾಯಾಲಯಗಳಿಂದ ನೋಟಿಸ್ ನೀಡುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿದೆ’ ಎಂದು ಅವರು ಆರೋಪಿಸಿದರು.