ತಾಲ್ಲೂಕಿನಲ್ಲಿ 40 ಹೆಕ್ಟೇರ್ಗಿಂತಲೂ ಅಧಿಕ ಪ್ರದೇಶದಲ್ಲಿ ರೈತರು ಕೇಸರ, ಬೇನಿಸಾನ್, ದಶೇರಿ, ರತ್ನಗಿರಿ ಆಪೂಸು, ನೀಲಂ, ತೋತಾಪುರಿ ತಳಿಗಳನ್ನು ಬೆಳೆಯುತ್ತಾರೆ. ಡಿಸೆಂಬರ್ನಲ್ಲಿ ಹೂವು ಬಿಟ್ಟು, ಏಪ್ರಿಲ್ ತಿಂಗಳಲ್ಲಿ ಬರಬೇಕಾಗಿತ್ತು, ಆದರೆ ವಾತಾವರಣದ ವೈಪರೀತ್ಯದಿಂದಾಗಿ ಹೆಚ್ಚುಕಡಿಮೆ ಎರಡು ತಿಂಗಳು ತಡವಾಗಿ ಹೂವು ಬಂದಿದ್ದೇ ಇದಕ್ಕೆ ಕಾರಣ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.