ರೈತರು ಹಾಗೂ ಕುಟುಂಬದವರು ಚಕ್ಕಡಿ, ಟ್ರ್ಯಾಕ್ಟರ್ನಲ್ಲಿ ಬುತ್ತಿ ಕಟ್ಟಿಕೊಂಡು ಹೊಲಕ್ಕೆ ಹೋಗುತ್ತಾರೆ. ಎಳ್ಳು ಹಚ್ಚಿದ ರೊಟ್ಟಿ, ಎಳ್ಳು ಕಡುಬು, ಕಡಲೆಗಡುಬು, ಬದನೆಕಾಯಿ ಪಲ್ಲೆ, ಚಟ್ನಿಯಂತಹ ಖಾದ್ಯಗಳ ಬುತ್ತಿ ಕಟ್ಟಿಕೊಂಡು ಹೋಗುತ್ತಾರೆ. ಆದರೆ, ಈ ಬಾರಿ ಮಳೆಯ ಕೊರತೆ ಕಾರಣ ಜಿಲ್ಲೆಯ ಬಹುತೇಕ ಕಡೆ ಹೊಲ ನಳನಳಿಸುತ್ತಿಲ್ಲ. ತೋಟಗಾರಿಕೆ ಬೆಳೆಗಳನ್ನು ಬೆಳೆದ ಭಾಗದಲ್ಲಿ ಮಾತ್ರ ರೈತರಿಗೆ ಹಬ್ಬದ ಆಚರಣೆಗೆ ಅವಕಾಶವಿದೆ.