<p><strong>ಕನಕಗಿರಿ</strong>: ‘ಡಿ. 27ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರಿಗಳು ಹಾಗೂ ಮತದಾರರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾ ಚುನಾವಣಾ ವೀಕ್ಷಕ ಡಾ.ಡಿ. ಷಣ್ಮುಖ ತಿಳಿಸಿದರು.</p>.<p>ಇಲ್ಲಿನ ನಂದಿ ಚಿತ್ರ ಮಂದಿರದಲ್ಲಿ ನಡೆದ ಪಿಆರ್ಒ ಹಾಗೂ ಎಪಿಆರ್ಒಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಚುನಾವಣಾ ಆಯೋಗದ ಸೂಚನೆಯಂತೆ ಮತಗಟ್ಟೆ ವ್ಯಾಪ್ತಿಯಲ್ಲಿ ಜನ ಅಂತರ ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತದಾನ ಮಾಡಬೇಕು ಎಂದು ಹೇಳಿದರು.</p>.<p>ಕೊರೊನಾ ಸೋಂಕಿತರಿಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಮತಗಟ್ಟೆ ಕೇಂದ್ರದಲ್ಲಿ ಕಿಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ನೋಡಲ್ ಅಧಿಕಾರಿ ಕೃಷ್ಣ ಉಕ್ಕುಂದ ಮಾತನಾಡಿ,‘ಗ್ರಾಮ ಪಂಚಾಯಿತಿ ಚುನಾವಣೆಯನ್ನು ಅಧಿಕಾರಿಗಳು ಲಘುವಾಗಿ ಪರಿಗಣಿಸಬಾರದು’ ಎಂದರು.</p>.<p>ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ಮತಗಟ್ಟೆಗಳಲ್ಲಿ ಎದುರಾಗುವ ಗೊಂದಲ, ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿ ತೆರೆಯಲಾಗಿದೆ. ಮತದಾರರುಸಹಾಯವಾಣಿ ಸಮಖ್ಯೆ 9113079488 ಹಾಗೂ 8951273083 ಸಂಪರ್ಕಿಸಬೇಕು ಎಂದು ತಿಳಿಸಿದರು.</p>.<p>ಪಿಎಸ್ಐ ಡಿ.ಸುರೇಶ, ಎಂಸಿಸಿ ತಂಡದ ನಾಯಕ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ, ಅಬಕಾರಿ ಇಲಾಖೆಯ ಉಪ ನಿರೀಕ್ಷಕಿ ಸುಮಾ ಮಾತನಾಡಿದರು.</p>.<p>ಪ್ರಾಂಶುಪಾಲ ಬಸವರಾಜ ಬಡಿಗೇರ ಹಾಗೂ ಪ್ರಾಧ್ಯಾಪಕ ಸರ್ಫರಾಜ ಆಹ್ಮದ ತರಬೇತಿ ನೀಡಿದರು. ಜಿಲ್ಲಾ ಚುನಾವಣಾ ವೀಕ್ಷಕರ ಸಹಾಯಕ ಕೃಷ್ಣಮೂರ್ತಿ ದೇಸಾಯಿ , ಶಿರಸ್ತೇದಾರರಾದ ಧನಂಜಯ ಮಾಲಗಿತ್ತಿ ಹಾಗೂ ವಿಶ್ವೇಶ್ವರಯ್ಯ ಸಾಲಿಮಠ ಇದ್ದರು. ಶಿಕ್ಷಕ ಪ್ರಭುಲಿಂಗ ವಸ್ತ್ರದ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ‘ಡಿ. 27ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಧಿಕಾರಿಗಳು ಹಾಗೂ ಮತದಾರರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾ ಚುನಾವಣಾ ವೀಕ್ಷಕ ಡಾ.ಡಿ. ಷಣ್ಮುಖ ತಿಳಿಸಿದರು.</p>.<p>ಇಲ್ಲಿನ ನಂದಿ ಚಿತ್ರ ಮಂದಿರದಲ್ಲಿ ನಡೆದ ಪಿಆರ್ಒ ಹಾಗೂ ಎಪಿಆರ್ಒಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಚುನಾವಣಾ ಆಯೋಗದ ಸೂಚನೆಯಂತೆ ಮತಗಟ್ಟೆ ವ್ಯಾಪ್ತಿಯಲ್ಲಿ ಜನ ಅಂತರ ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತದಾನ ಮಾಡಬೇಕು ಎಂದು ಹೇಳಿದರು.</p>.<p>ಕೊರೊನಾ ಸೋಂಕಿತರಿಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಮತಗಟ್ಟೆ ಕೇಂದ್ರದಲ್ಲಿ ಕಿಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ನೋಡಲ್ ಅಧಿಕಾರಿ ಕೃಷ್ಣ ಉಕ್ಕುಂದ ಮಾತನಾಡಿ,‘ಗ್ರಾಮ ಪಂಚಾಯಿತಿ ಚುನಾವಣೆಯನ್ನು ಅಧಿಕಾರಿಗಳು ಲಘುವಾಗಿ ಪರಿಗಣಿಸಬಾರದು’ ಎಂದರು.</p>.<p>ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ಮತಗಟ್ಟೆಗಳಲ್ಲಿ ಎದುರಾಗುವ ಗೊಂದಲ, ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿ ತೆರೆಯಲಾಗಿದೆ. ಮತದಾರರುಸಹಾಯವಾಣಿ ಸಮಖ್ಯೆ 9113079488 ಹಾಗೂ 8951273083 ಸಂಪರ್ಕಿಸಬೇಕು ಎಂದು ತಿಳಿಸಿದರು.</p>.<p>ಪಿಎಸ್ಐ ಡಿ.ಸುರೇಶ, ಎಂಸಿಸಿ ತಂಡದ ನಾಯಕ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಪಾಟೀಲ, ಅಬಕಾರಿ ಇಲಾಖೆಯ ಉಪ ನಿರೀಕ್ಷಕಿ ಸುಮಾ ಮಾತನಾಡಿದರು.</p>.<p>ಪ್ರಾಂಶುಪಾಲ ಬಸವರಾಜ ಬಡಿಗೇರ ಹಾಗೂ ಪ್ರಾಧ್ಯಾಪಕ ಸರ್ಫರಾಜ ಆಹ್ಮದ ತರಬೇತಿ ನೀಡಿದರು. ಜಿಲ್ಲಾ ಚುನಾವಣಾ ವೀಕ್ಷಕರ ಸಹಾಯಕ ಕೃಷ್ಣಮೂರ್ತಿ ದೇಸಾಯಿ , ಶಿರಸ್ತೇದಾರರಾದ ಧನಂಜಯ ಮಾಲಗಿತ್ತಿ ಹಾಗೂ ವಿಶ್ವೇಶ್ವರಯ್ಯ ಸಾಲಿಮಠ ಇದ್ದರು. ಶಿಕ್ಷಕ ಪ್ರಭುಲಿಂಗ ವಸ್ತ್ರದ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>