ಈ ವೇಳೆ ಮಾತನಾಡಿ, ಹಣವನ್ನು ಸರ್ಕಾರಕ್ಕೆ ಕೊಟ್ಟಿದ್ದೇನೆ ಎನ್ನುವ ಮಾತು ಆಡಿಯೊದಲ್ಲಿದೆ. ಸರ್ಕಾರ ಅಂದರೆ ಯಾರ ಕೈಯಲ್ಲಿ ಹಣ ಕೊಟ್ಟಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಶಾಸಕರ ಹೇಳಿಕೆ ಗಮನಿಸಿದರೆ ಪೂರ್ಣ ಸರ್ಕಾರವೇ ಹಗರಣದಲ್ಲಿ ಭಾಗಿಯಾದಂತೆ ಕಾಣುತ್ತಿದೆ ಎಂದು ಆರೋಪಿಸಿದರು.
ಹಗರಣ ಬಗ್ಗೆ ಸಂಪೂರ್ಣ ಪಾರದರ್ಶಕ ತನಿಖೆ ನಡೆಯಬೇಕು. ಎನೂ ತಪ್ಪು ಮಾಡದ ಅಭ್ಯರ್ಥಿಗಳು ಇದ್ದು, ಅವರಿಗೆ ನ್ಯಾಯ ಸಿಗಬೇಕು ಎಂದರು.