<p><strong>ಕುಕನೂರು (ಕೊಪ್ಪಳ):</strong> ತಾಲ್ಲೂಕಿನ ವಿವಿಧ ದೇವಸ್ಥಾನಗಳಲ್ಲಿ ಜಂಗಮ ಸಮಾಜದ ಪುರೋಹಿತರಾಗಿರುವ ಅರ್ಚಕರಿಗೆ ಸರ್ಕಾರದಿಂದ ಸಹಾಯಧನ ನೀಡಬೇಕೆಂದು ಶಾಸಕ ಹಾಲಪ್ಪ ಆಚಾರ್ ಅವರಿಗೆ ಜಂಗಮ ಸಮಾಜದವರು ಮಂಗಳವಾರ ಮನವಿ ಸಲ್ಲಿಸಿದರು.</p>.<p>ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳು ಮುಚ್ಚಿವೆ. ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಜಂಗಮ ಸಮಾಜದ ಪೂರೋಹಿತರು ಸೇವೆಯನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ದೇವಸ್ಥಾನ ಬಂದ್ ಆಗಿರುವ ಹಿನ್ನೆಲೆಯಲ್ಲಿ ಅವರ ಜೀವನ ನಡೆಸಲು ಸಮಸ್ಯೆಯಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಅನೇಕ ವರ್ಗದವರಿಗೆ ₹ 5,000 ಸಹಾಯಧನ ನೀಡುತ್ತಿದೆ. ಅದರಂತೆ ನಮಗೂ ಸಹ ಸಹಾಯಧನ ನೀಡಬೇಕೆಂದು ಮನವಿಯಲ್ಲಿ ತಿಳಿಸಿದರು.</p>.<p>ಬಸಯ್ಯ ಹಿರೇಮಠ, ರೇಣುಕ ಪ್ರಸನ್ ಹಿರೇಮಠ, ಶಾಂತಯ್ಯ, ಈಶ್ವರಯ್ಯ ಕೋತಬಾಳಮಠ, ಗುರುಮೂರ್ತೆಯ್ಯ, ಕಳಕಯ್ಯ, ಮಲ್ಲಿಕಾರ್ಜುನ್, ಶರಣಯ್ಯ, ಸಿದ್ದಯ್ಯ, ನೀಲಕಂಠಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು (ಕೊಪ್ಪಳ):</strong> ತಾಲ್ಲೂಕಿನ ವಿವಿಧ ದೇವಸ್ಥಾನಗಳಲ್ಲಿ ಜಂಗಮ ಸಮಾಜದ ಪುರೋಹಿತರಾಗಿರುವ ಅರ್ಚಕರಿಗೆ ಸರ್ಕಾರದಿಂದ ಸಹಾಯಧನ ನೀಡಬೇಕೆಂದು ಶಾಸಕ ಹಾಲಪ್ಪ ಆಚಾರ್ ಅವರಿಗೆ ಜಂಗಮ ಸಮಾಜದವರು ಮಂಗಳವಾರ ಮನವಿ ಸಲ್ಲಿಸಿದರು.</p>.<p>ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳು ಮುಚ್ಚಿವೆ. ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಜಂಗಮ ಸಮಾಜದ ಪೂರೋಹಿತರು ಸೇವೆಯನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ದೇವಸ್ಥಾನ ಬಂದ್ ಆಗಿರುವ ಹಿನ್ನೆಲೆಯಲ್ಲಿ ಅವರ ಜೀವನ ನಡೆಸಲು ಸಮಸ್ಯೆಯಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಅನೇಕ ವರ್ಗದವರಿಗೆ ₹ 5,000 ಸಹಾಯಧನ ನೀಡುತ್ತಿದೆ. ಅದರಂತೆ ನಮಗೂ ಸಹ ಸಹಾಯಧನ ನೀಡಬೇಕೆಂದು ಮನವಿಯಲ್ಲಿ ತಿಳಿಸಿದರು.</p>.<p>ಬಸಯ್ಯ ಹಿರೇಮಠ, ರೇಣುಕ ಪ್ರಸನ್ ಹಿರೇಮಠ, ಶಾಂತಯ್ಯ, ಈಶ್ವರಯ್ಯ ಕೋತಬಾಳಮಠ, ಗುರುಮೂರ್ತೆಯ್ಯ, ಕಳಕಯ್ಯ, ಮಲ್ಲಿಕಾರ್ಜುನ್, ಶರಣಯ್ಯ, ಸಿದ್ದಯ್ಯ, ನೀಲಕಂಠಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>