ಕುಕನೂರು (ಕೊಪ್ಪಳ): ತಾಲ್ಲೂಕಿನ ವಿವಿಧ ದೇವಸ್ಥಾನಗಳಲ್ಲಿ ಜಂಗಮ ಸಮಾಜದ ಪುರೋಹಿತರಾಗಿರುವ ಅರ್ಚಕರಿಗೆ ಸರ್ಕಾರದಿಂದ ಸಹಾಯಧನ ನೀಡಬೇಕೆಂದು ಶಾಸಕ ಹಾಲಪ್ಪ ಆಚಾರ್ ಅವರಿಗೆ ಜಂಗಮ ಸಮಾಜದವರು ಮಂಗಳವಾರ ಮನವಿ ಸಲ್ಲಿಸಿದರು.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ದೇವಸ್ಥಾನಗಳು ಮುಚ್ಚಿವೆ. ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಜಂಗಮ ಸಮಾಜದ ಪೂರೋಹಿತರು ಸೇವೆಯನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ದೇವಸ್ಥಾನ ಬಂದ್ ಆಗಿರುವ ಹಿನ್ನೆಲೆಯಲ್ಲಿ ಅವರ ಜೀವನ ನಡೆಸಲು ಸಮಸ್ಯೆಯಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಅನೇಕ ವರ್ಗದವರಿಗೆ ₹ 5,000 ಸಹಾಯಧನ ನೀಡುತ್ತಿದೆ. ಅದರಂತೆ ನಮಗೂ ಸಹ ಸಹಾಯಧನ ನೀಡಬೇಕೆಂದು ಮನವಿಯಲ್ಲಿ ತಿಳಿಸಿದರು.