ಕೊಪ್ಪಳ: ಇಲ್ಲಿನ ಗವಿಮಠದ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಬಂದಿದ್ದಾರೆ.
ರಥೋತ್ಸವ ಸಂಜೆ ಇದ್ದರೂ ಭಾನುವಾರ ಬೆಳಗಿನ ಜಾವದಿಂದಲೇ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಸರಿಯಾಗಿ ಆರು ಗಂಟೆಗೆ ರಥೋತ್ಸವ ಜರುಗಲಿದ್ದು, ಜನಸಂದಣಿಯ ಅದ್ಭುತ ವೈಭವ ಕಣ್ಣು ತುಂಬಿಕೊಂಡರು.
ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಬಸವರಾಜ ರಾಯರಡ್ಡಿ ಸಚಿವರಾದ ಆನಂದ ಸಿಂಗ್, ಹಾಲಪ್ಪ ಆಚಾರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.