’ಗೋವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಪ್ರಾಣಿಗಳಿಗೂ ತುರ್ತು ಚಿಕಿತ್ಸೆ ಒದಗಿಸಲು ಪಶು ಸಂಜೀವಿನಿಅಂಬುಲನ್ಸ್ ಜಾರಿಗೆ ತರಲಾಗಿದ್ದು, 1962 ಕ್ಕೆ ಕರೆ ಮಾಡಿ ಸೇವೆ ಪಡೆಯಬಹುದು ಎಂದರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಖಾಸಗಿ ಗೋಶಾಲೆಗಳು ಜಾನುವಾರುಗಳ ರಕ್ಷಣೆಯ ಉತ್ತಮ ಕಾರ್ಯ ಮಾಡುತ್ತಿದ್ದು, ಅವುಗಳಿಗೆ ಸರ್ಕಾರದಿಂದ ಸಹಾಯಧನ ನೀಡಿದರೆ ಅನುಕೂಲವಾಗುತ್ತದೆ ಎಂದು ಹೇಳಿದರು. ಎಸ್ಪಿಟಿ.ಶ್ರೀಧರ್ ಮಾತನಾಡಿದರು. ಸಂಸದ ಕರಡಿ ಸಂಗಣ್ಣ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಸಿಇಒಬಿ.ಫೌಜಿಯಾ ತರನ್ನುಮ್, ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಎಚ್.ನಾಗರಾಜ್ ಇದ್ದರು.