ಸೋಮವಾರ ಅಂಜನಾದ್ರಿ ಬೆಟ್ಟ ಏರಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ ‘ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ಅನ್ನದಾಸೋಹಕ್ಕೆ ಮರುಚಾಲನೆ ನೀಡಲಾಗಿದೆ. ಅಂಜನಾದ್ರಿ ಬೆಟ್ಟ ಶ್ರೀರಾಮನ ಭಕ್ತ ಹನುಮಂತನ ಜನ್ಮಸ್ಥಳ. ಈ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ. ಇದನ್ನು ಸಾಬೀತುಪಡಿಸಲು ಬೇಕಾದ ಎಲ್ಲಾ ದಾಖಲೆಗಳು ನಮ್ಮ ಮುಂದೆ ಇವೆ‘ ಎಂದರು.