<p><strong>ಕಾರಟಗಿ</strong>: ಹೈ-ಕ ಭಾಗದಲ್ಲಿ 371ಜೆ ಸಂಜೀವಿನಿಯಾಗಿದೆ. ಈಗಾಗಲೇ ಅಧಿಕ ಉದ್ಯೋಗಾವಕಾಶಗಳು ದೊರೆಯುತ್ತಿವೆ. ಭವಿಷ್ಯದಲ್ಲಿ ನಮ್ಮ ಭಾಗದವರೇ ಶೇ 80ಕ್ಕೂ ಅಧಿಕ ಸಂಖ್ಯೆಯಲ್ಲಿ ಶಿಕ್ಷಕರಿರಲಿದ್ದಾರೆ. ಜೊತೆಗೆ ಇತರ ಉದ್ಯೋಗ, ಉನ್ನತ ಶಿಕ್ಷಣಕ್ಕೂ ಪ್ರಾಶಸ್ತ್ಯ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.</p>.<p>ತಾಲ್ಲೂಕಿನ ಮರ್ಲಾನಹಳ್ಳಿಯಲ್ಲಿ ನಡೆದ ಕಾರಟಗಿ ತಾಲ್ಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕನಕಗಿರಿ ಕ್ಷೇತ್ರದಲ್ಲಿ ಕೆರೆ ತುಂಬುವ ಯೋಜನೆಯಿಂದ ಜನ, ಜಾನುವಾರು, ಕೃಷಿ, ತೋಟಗಾರಿಕೆಗೆ ಬಹುದೊಡ್ಡ ವರದಾನವಾಗಿದೆ. ಈ ಯೋಜನೆ ರಾಜ್ಯಕ್ಕೆ ಮಾದರಿಯಾಗಿದೆ. ತುಂಗಭದ್ರಾ ಜಲಾಶಯದ 10 ಗೇಟ್ಗಳನ್ನು ಅಳವಡಿಸಲಾಗಿದೆ. ಮೇ ಅಂತ್ಯದೊಳಗೆ ಉಳಿದೆಲ್ಲಾ ಗೇಟ್ಗಳನ್ನು ಅಳವಡಿಸಲಾಗುವುದು’ ಎಂದರು.</p>.<p>ಹೋರಾಟಗಾರ ಬಸವಂತರಾಯ ಕುರಿ ಮಾತನಾಡಿ, ‘ಭಾಷೆಯ ಪ್ರಾಮುಖ್ಯತೆ ಸಾಕಷ್ಟಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಭಾಷೆಯನ್ನು ನಿರ್ಲಕ್ಷಿಸುತ್ತಿರುವುದು ವಿಷಾದಕರ. ದಾರ್ಶನಿಕರು, ತತ್ವಪದಕಾರರ ಸಂವೇದನೆಯನ್ನು ಜನರು ಅರಿತು ಅವನ್ನು ಅಳವಡಿಸಿಕೊಳ್ಳಬೇಕಿದೆ’ ಎಂದರು.</p>.<p>‘ಪ್ರಾದೇಶಿಕ ಅಸಮಾನತೆ ಕೆಲ ಶತಮಾನ ಉರುಳಿದರೂ ಮುಂದುವರೆದಿದೆ. 371ಜೆ ಕಲಂನಿಂದ ಅಲ್ಪ ಮಟ್ಟಿಗೆ ಪ್ರಾದೇಶಿಕ ಅಸಮಾನತೆ ದೂರವಾಗಿ, ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ. ಡಿ.ಎಂ. ನಂಜುಂಡಪ್ಪ ವರದಿ, ಗೋವಿಂದರಾವ್ ವರದಿಯಲ್ಲಿ ಹಿಂದುಳಿತ ತಾಲ್ಲೂಕುಗಳ ಪಟ್ಟಿಯಲ್ಲಿ ನಮ್ಮ ಭಾಗದ ತಾಲ್ಲೂಕುಗಳು ಮುಂದುವರೆದಿರುವುದು ದುರಂತ’ ಎಂದರು.</p>.<p>ಸಮ್ಮೇಳನದ ಅಧ್ಯಕ್ಷ ಸಿ.ಬಿ. ಚಿಲ್ಕರಾಗಿ, ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸಪಾಟೀಲ್, ತಾಲ್ಲೂಕು ಅಧ್ಯಕ್ಷ ಶರಣಪ್ಪ ಕೋಟ್ಯಾಳ ಸಹಿತ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ</strong>: ಹೈ-ಕ ಭಾಗದಲ್ಲಿ 371ಜೆ ಸಂಜೀವಿನಿಯಾಗಿದೆ. ಈಗಾಗಲೇ ಅಧಿಕ ಉದ್ಯೋಗಾವಕಾಶಗಳು ದೊರೆಯುತ್ತಿವೆ. ಭವಿಷ್ಯದಲ್ಲಿ ನಮ್ಮ ಭಾಗದವರೇ ಶೇ 80ಕ್ಕೂ ಅಧಿಕ ಸಂಖ್ಯೆಯಲ್ಲಿ ಶಿಕ್ಷಕರಿರಲಿದ್ದಾರೆ. ಜೊತೆಗೆ ಇತರ ಉದ್ಯೋಗ, ಉನ್ನತ ಶಿಕ್ಷಣಕ್ಕೂ ಪ್ರಾಶಸ್ತ್ಯ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.</p>.<p>ತಾಲ್ಲೂಕಿನ ಮರ್ಲಾನಹಳ್ಳಿಯಲ್ಲಿ ನಡೆದ ಕಾರಟಗಿ ತಾಲ್ಲೂಕು ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕನಕಗಿರಿ ಕ್ಷೇತ್ರದಲ್ಲಿ ಕೆರೆ ತುಂಬುವ ಯೋಜನೆಯಿಂದ ಜನ, ಜಾನುವಾರು, ಕೃಷಿ, ತೋಟಗಾರಿಕೆಗೆ ಬಹುದೊಡ್ಡ ವರದಾನವಾಗಿದೆ. ಈ ಯೋಜನೆ ರಾಜ್ಯಕ್ಕೆ ಮಾದರಿಯಾಗಿದೆ. ತುಂಗಭದ್ರಾ ಜಲಾಶಯದ 10 ಗೇಟ್ಗಳನ್ನು ಅಳವಡಿಸಲಾಗಿದೆ. ಮೇ ಅಂತ್ಯದೊಳಗೆ ಉಳಿದೆಲ್ಲಾ ಗೇಟ್ಗಳನ್ನು ಅಳವಡಿಸಲಾಗುವುದು’ ಎಂದರು.</p>.<p>ಹೋರಾಟಗಾರ ಬಸವಂತರಾಯ ಕುರಿ ಮಾತನಾಡಿ, ‘ಭಾಷೆಯ ಪ್ರಾಮುಖ್ಯತೆ ಸಾಕಷ್ಟಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಭಾಷೆಯನ್ನು ನಿರ್ಲಕ್ಷಿಸುತ್ತಿರುವುದು ವಿಷಾದಕರ. ದಾರ್ಶನಿಕರು, ತತ್ವಪದಕಾರರ ಸಂವೇದನೆಯನ್ನು ಜನರು ಅರಿತು ಅವನ್ನು ಅಳವಡಿಸಿಕೊಳ್ಳಬೇಕಿದೆ’ ಎಂದರು.</p>.<p>‘ಪ್ರಾದೇಶಿಕ ಅಸಮಾನತೆ ಕೆಲ ಶತಮಾನ ಉರುಳಿದರೂ ಮುಂದುವರೆದಿದೆ. 371ಜೆ ಕಲಂನಿಂದ ಅಲ್ಪ ಮಟ್ಟಿಗೆ ಪ್ರಾದೇಶಿಕ ಅಸಮಾನತೆ ದೂರವಾಗಿ, ಅಭಿವೃದ್ಧಿಗೆ ಸಹಕಾರಿಯಾಗುತ್ತಿದೆ. ಡಿ.ಎಂ. ನಂಜುಂಡಪ್ಪ ವರದಿ, ಗೋವಿಂದರಾವ್ ವರದಿಯಲ್ಲಿ ಹಿಂದುಳಿತ ತಾಲ್ಲೂಕುಗಳ ಪಟ್ಟಿಯಲ್ಲಿ ನಮ್ಮ ಭಾಗದ ತಾಲ್ಲೂಕುಗಳು ಮುಂದುವರೆದಿರುವುದು ದುರಂತ’ ಎಂದರು.</p>.<p>ಸಮ್ಮೇಳನದ ಅಧ್ಯಕ್ಷ ಸಿ.ಬಿ. ಚಿಲ್ಕರಾಗಿ, ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸಪಾಟೀಲ್, ತಾಲ್ಲೂಕು ಅಧ್ಯಕ್ಷ ಶರಣಪ್ಪ ಕೋಟ್ಯಾಳ ಸಹಿತ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>