ಅವಮಾನದ ಸಂಗತಿ: ಮುಖಂಡ ಡಿ.ಎಚ್.ಪೂಜಾರ ಮಾತನಾಡಿ ‘ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ನಡೆದಿರುವುದು ಈ ದೇಶಕ್ಕೆ ಅವಮಾನದ ಸಂಗತಿಯಾಗಿದೆ. ದೂರು ಕೊಟ್ಟಿದ್ದಕ್ಕೆ ಮೇಲ್ಜಾತಿಯ ಜನರು ನಮಗೆ ಟಾರ್ಗೆಟ್ ಮಾಡಿದ್ದಾರೆ. ಹೊಲಗಳಿಗೆ ಹೋದಾಗ ಕಲ್ಲಿನಿಂದ ಹೊಡೆಯುತ್ತಿದ್ದಾರೆ ಎಂದು ನೊಂದವರು ಅಳಲು ತೋಡಿಕೊಳ್ಳುತ್ತಿದ್ದಾರೆ. ಅಂಗಡಿಯಲ್ಲಿ ಪ್ರವೇಶ ನೀಡದ, ಕಟಿಂಗ್ ಮಾಡಲು ತಿರಸ್ಕರಿಸುವ ಅಂಗಡಿಕಾರರ ಮೇಲೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.