ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಬಲಕಟ್ಟಿಗೆ ಶಾಸಕ ಅಮರೇಗೌಡ ಬಯ್ಯಾಪುರ ಭೇಟಿ

ಸಮಸ್ಯೆಗಳನ್ನು ಬಿಚ್ಚಿಟ್ಟ ಗ್ರಾಮಸ್ಥರು: ಸಿ.ಸಿ ನಿರ್ಮಿಸಿ ಕೊಡುವ ಭರವಸೆ
Last Updated 30 ಏಪ್ರಿಲ್ 2022, 11:35 IST
ಅಕ್ಷರ ಗಾತ್ರ

ಹನುಮಸಾಗರ: ಸಮೀಪದ ಹಾಬಲಕಟ್ಟಿ ಗ್ರಾಮಕ್ಕೆ ಶಾಸಕ ಅಮರೇಗೌಡ ಬಯ್ಯಾಪುರ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.

‘ಭೀಮಾಂಬಿಕಾದೇವಿ ಪಾದಗಟ್ಟೆಯಿಂದ ಶರಬಸವೇಶ್ವರ ಪಾದಗಟ್ಟೆಯವರೆಗೆ ಗ್ರಾಮದ ಮುಖ್ಯ ರಸ್ತೆ ಇದೆ. ಅದನ್ನು ಸಿ.ಸಿ ರಸ್ತೆಯನ್ನಾಗಿ ಪರಿವರ್ತಿಸುವ ಅಗತ್ಯ ಇದೆ. ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳು ದೂರದಲ್ಲಿರುವ ಪ್ರೌಢ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಗ್ರಾಮದಲ್ಲಿರುವ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಬೇಕು’ ಎಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಅಮರೇಗೌಡ ಬಯ್ಯಾಪುರ,‘ಕೂಡಲೇ ಸಿ.ಸಿ ರಸ್ತೆ ನಿರ್ಮಿಸಲಾಗುವುದು. ಪ್ರಾಥಮಿಕ ಶಾಲೆಯನ್ನು ಮೇಲ್ದರ್ಜೆಗೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ’ ಎಂದು ಭರವಸೆ ನೀಡಿದರು.

ಗ್ರಾಮದ ಪ್ರಮುಖರಾದ ಮುತ್ತಪ್ಪ ಹವಾಲ್ದಾರ, ಶಂಕರಪ್ಪ ಚಕ್ಕಡಿ, ಶಂಕರ ಗಡಾದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ ಭೋವಿ, ಬಸವರಾಜ ಪಾಟೀಲ ಹಾಗೂ ಶಿವಶರಣಪ್ಪ ಹೆಬ್ಬುಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT