<p>ಕುಷ್ಟಗಿ: ಬುಧವಾರ ರಾತ್ರಿ ಅತಿ ಹೆಚ್ಚಿನ ಮಳೆ ಸುರಿದು ಜಲಾವೃತಗೊಂಡು ಸಮಸ್ಯೆಗೊಳಗಾದ ಪಟ್ಟಣದ ವಿವಿಧ ಜನವಸತಿ ಪ್ರದೇಶಗಳಿಗೆ ಶಾಸಕ, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ ಗುರುವಾರ ಭೇಟಿ ನೀಡಿದರು.</p>.<p>ಸಂದೀಪನಗರ, ಕರೀಂ ಕಾಲೊನಿ, ಭೋವಿ ಜನರ ಕಾಲೊನಿ, ಬುತ್ತಿಬಸವೇಶ್ವರ ನಗರ, ಶಾದಿಮಹಲ್ ಪ್ರದೇಶ, ಮುಲ್ಲಾರ ಗಲ್ಲಿ ಇತರೆ ಸ್ಥಳಗಳಲ್ಲಿ ಮಳೆಯ ಮತ್ತು ಚರಂಡಿ ನೀರು ಸಂಗ್ರಹವಾಗಿ ಜನರು ತೊಂದರೆಗೆ ಒಳಗಾಗಿದ್ದು ಶಾಸಕ ಸ್ಥಳ ಪರಿಶೀಲನೆ ನಡೆಸಿದ ವೇಳೆ ಗಮನಕ್ಕೆ ಬಂದಿತು. ಈ ಸಂದರ್ಭದಲ್ಲಿ ಅಲ್ಲಿಯ ನಿವಾಸಿಗಳು ದೊಡ್ಡ ಪ್ರಮಾಣದಲ್ಲಿ ಮಳೆ ಬಂದ ಸಂದರ್ಭದಲ್ಲಿ ಪದೇ ಪದೇ ಎದುರಾಗುವ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು.</p>.<p>ಕಾಲುವೆ, ಚರಂಡಿಗಳ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೈರ್ಮಲ್ಯ ವ್ಯವಸ್ಥೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ಸ್ಥಳದಲ್ಲಿದ್ದ ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ ಅವರಿಗೆ ಶಾಸಕ ಪಾಟೀಲ ತಾಕೀತು ಮಾಡಿದರು.</p>.<p>ಪುರಸಭೆ ಸದಸ್ಯರಾದ ಕಲ್ಲೇಶ ತಾಳದ, ಅಮೀನುದ್ದಿನ್ ಮುಲ್ಲಾ, ಆಲಂಪಾಷಾ ಇತರರು ಇದ್ದರು.</p>.<p>ತಾಲ್ಲೂಕಿನ ವಿವಿಧ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗಿರುವ ಪ್ರಮಾಣ ಈ ರೀತಿ ಇದೆ. ಕುಷ್ಟಗಿ 59.2 ಮಿ.ಮೀ, ಹನುಮಸಾಗರ 28.2 ಮಿ.ಮೀ, ಹನುಮನಾಳ 19 ಮಿ.ಮೀ, ದೊಟಿಹಾಳ 14.1 ಮಿ.ಮೀ, ಕಿಲಾರಟ್ಟಿ 11.2 ಮಿ.ಮೀ ಮತ್ತು ತಾವರಗೇರಾದಲ್ಲಿ 34 ಮಿ.ಮೀ ಮಳೆ ದಾಖಲಾಗಿದೆ ಎಂದು ಕಂದಾಯ ಇಲಾಖೆ ಮಾಹಿತಿ ತಿಳಿಸಿದೆ.</p>.<p>ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕುಗಳ ಸೀಮಾಂತರ ಹಳ್ಳಿಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಮದಲಗಟ್ಟಿ ಬಳಿಯ ನಿಡಶೇಸಿ ಕೆರೆಗೆ ನೀರು ಹರಿದುಬರುತ್ತಿರುವುದು ಕಂಡುಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಷ್ಟಗಿ: ಬುಧವಾರ ರಾತ್ರಿ ಅತಿ ಹೆಚ್ಚಿನ ಮಳೆ ಸುರಿದು ಜಲಾವೃತಗೊಂಡು ಸಮಸ್ಯೆಗೊಳಗಾದ ಪಟ್ಟಣದ ವಿವಿಧ ಜನವಸತಿ ಪ್ರದೇಶಗಳಿಗೆ ಶಾಸಕ, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ ಗುರುವಾರ ಭೇಟಿ ನೀಡಿದರು.</p>.<p>ಸಂದೀಪನಗರ, ಕರೀಂ ಕಾಲೊನಿ, ಭೋವಿ ಜನರ ಕಾಲೊನಿ, ಬುತ್ತಿಬಸವೇಶ್ವರ ನಗರ, ಶಾದಿಮಹಲ್ ಪ್ರದೇಶ, ಮುಲ್ಲಾರ ಗಲ್ಲಿ ಇತರೆ ಸ್ಥಳಗಳಲ್ಲಿ ಮಳೆಯ ಮತ್ತು ಚರಂಡಿ ನೀರು ಸಂಗ್ರಹವಾಗಿ ಜನರು ತೊಂದರೆಗೆ ಒಳಗಾಗಿದ್ದು ಶಾಸಕ ಸ್ಥಳ ಪರಿಶೀಲನೆ ನಡೆಸಿದ ವೇಳೆ ಗಮನಕ್ಕೆ ಬಂದಿತು. ಈ ಸಂದರ್ಭದಲ್ಲಿ ಅಲ್ಲಿಯ ನಿವಾಸಿಗಳು ದೊಡ್ಡ ಪ್ರಮಾಣದಲ್ಲಿ ಮಳೆ ಬಂದ ಸಂದರ್ಭದಲ್ಲಿ ಪದೇ ಪದೇ ಎದುರಾಗುವ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು.</p>.<p>ಕಾಲುವೆ, ಚರಂಡಿಗಳ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೈರ್ಮಲ್ಯ ವ್ಯವಸ್ಥೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ಸ್ಥಳದಲ್ಲಿದ್ದ ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ ಅವರಿಗೆ ಶಾಸಕ ಪಾಟೀಲ ತಾಕೀತು ಮಾಡಿದರು.</p>.<p>ಪುರಸಭೆ ಸದಸ್ಯರಾದ ಕಲ್ಲೇಶ ತಾಳದ, ಅಮೀನುದ್ದಿನ್ ಮುಲ್ಲಾ, ಆಲಂಪಾಷಾ ಇತರರು ಇದ್ದರು.</p>.<p>ತಾಲ್ಲೂಕಿನ ವಿವಿಧ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗಿರುವ ಪ್ರಮಾಣ ಈ ರೀತಿ ಇದೆ. ಕುಷ್ಟಗಿ 59.2 ಮಿ.ಮೀ, ಹನುಮಸಾಗರ 28.2 ಮಿ.ಮೀ, ಹನುಮನಾಳ 19 ಮಿ.ಮೀ, ದೊಟಿಹಾಳ 14.1 ಮಿ.ಮೀ, ಕಿಲಾರಟ್ಟಿ 11.2 ಮಿ.ಮೀ ಮತ್ತು ತಾವರಗೇರಾದಲ್ಲಿ 34 ಮಿ.ಮೀ ಮಳೆ ದಾಖಲಾಗಿದೆ ಎಂದು ಕಂದಾಯ ಇಲಾಖೆ ಮಾಹಿತಿ ತಿಳಿಸಿದೆ.</p>.<p>ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕುಗಳ ಸೀಮಾಂತರ ಹಳ್ಳಿಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಮದಲಗಟ್ಟಿ ಬಳಿಯ ನಿಡಶೇಸಿ ಕೆರೆಗೆ ನೀರು ಹರಿದುಬರುತ್ತಿರುವುದು ಕಂಡುಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>