ಯಲಬುರ್ಗಾ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ನಿರುದ್ಯೋಗಿ ವಿದ್ಯಾವಂತ ಯುವಕರಿಗೆ ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಕೌಶಲ ತರಬೇತಿಗೆ ಪ್ರೋತ್ಸಾಹ ಹಾಗೂ ಈ ಭಾಗದ ಶಿಕ್ಷಕರ ಮತ್ತು ಪದವೀಧರರ ಕಲ್ಯಾಣಕ್ಕೆ ಶ್ರಮಿಸಲು ಪಣ ತೊಟ್ಟಿರುವ ಎನ್. ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಬೇಕು ಎಂದು ಚಾಣಕ್ಯ ಕರಿಯರ್ ಅಕಾಡೆಮಿಯ ನಿರ್ದೇಶಕ ಪ್ರದೀಪ ಗುಡ್ಡದ ಹೇಳಿದರು.