<p><strong>ಗಂಗಾವತಿ:</strong> ನಗರದ ಹಿರೇಜಂತಕಲ್ ಸಮೀಪದ ಪ್ರಸನ್ನ ಪಂಪಾ ವಿರುಪಾಕ್ಷೇಶ್ವರ ದೇವಸ್ಥಾನದ ಹುಂಡಿ ಹಣ ಎಣಿಕೆ ಕಾರ್ಯ ಶನಿವಾರ ನಡೆಯಿತು.</p>.<p>ತಹಶೀಲ್ದಾರ್ ಯು.ನಾಗರಾಜ ಮಾತನಾಡಿ, ಎರಡು ವರ್ಷಗಳಿಂದ ಈ ದೇವಸ್ಥಾನದ ಹುಂಡಿ ಹಣ ಎಣಿಕೆ ಮಾಡಿರಲಿಲ್ಲ. ಇತ್ತೀಚಿಗೆ ಗಂಗಾವತಿ ತಾಲ್ಲೂಕಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಅದರಿಂದ ತಪ್ಪಿಸಲು ಕೋವಿಡ್ ಮಾರ್ಗಸೂಚಿ ನಿಯಮಗಳ ಪ್ರಕಾರ ಹುಂಡಿ ಹಣ ಎಣಿಕೆ ಮಾಡಲಾಯಿತು ಎಂದರು.</p>.<p>ಈ ವೇಳೆ ಪ್ರಸನ್ನ ಪಂಪಾ ವಿರುಪಾಕ್ಷೇಶ್ವರ ದೇವಸ್ಥಾನ ಹುಂಡಿಯಲ್ಲಿ ಒಟ್ಟು ₹ 1,29,530 ಸಂಗ್ರಹವಾಗಿದೆ. ಈ ಹಿಂದೆ ಫೆಬ್ರವರಿ 22, 2019 ರಂದು ಪ್ರಸನ್ನ ಪಂಪಾ ವಿರುಪಾಕ್ಷೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ ಮಾಡಿದ್ದ ವೇಳೆಯಲ್ಲಿ ಒಟ್ಟು ₹ 58,380 ಸಂಗ್ರಹವಾಗಿತ್ತು ಎಂದರು.</p>.<p>ಗ್ರೇಡ್ 2 ತಹಶೀಲ್ದಾರ್ ವಿ.ಎಚ್.ಹೊರಪೇಟಿ, ದೇವಸ್ಥಾನದ ಕಾರ್ಯದರ್ಶಿ ಮಂಜುನಾಥ ಹಿರೇಮಠ, ಗಂಗಾವತಿ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ಅಭೀಷೆಕ, ಮಹಾಲಕ್ಷ್ಮೀ, ಕಾವ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ನಗರದ ಹಿರೇಜಂತಕಲ್ ಸಮೀಪದ ಪ್ರಸನ್ನ ಪಂಪಾ ವಿರುಪಾಕ್ಷೇಶ್ವರ ದೇವಸ್ಥಾನದ ಹುಂಡಿ ಹಣ ಎಣಿಕೆ ಕಾರ್ಯ ಶನಿವಾರ ನಡೆಯಿತು.</p>.<p>ತಹಶೀಲ್ದಾರ್ ಯು.ನಾಗರಾಜ ಮಾತನಾಡಿ, ಎರಡು ವರ್ಷಗಳಿಂದ ಈ ದೇವಸ್ಥಾನದ ಹುಂಡಿ ಹಣ ಎಣಿಕೆ ಮಾಡಿರಲಿಲ್ಲ. ಇತ್ತೀಚಿಗೆ ಗಂಗಾವತಿ ತಾಲ್ಲೂಕಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಅದರಿಂದ ತಪ್ಪಿಸಲು ಕೋವಿಡ್ ಮಾರ್ಗಸೂಚಿ ನಿಯಮಗಳ ಪ್ರಕಾರ ಹುಂಡಿ ಹಣ ಎಣಿಕೆ ಮಾಡಲಾಯಿತು ಎಂದರು.</p>.<p>ಈ ವೇಳೆ ಪ್ರಸನ್ನ ಪಂಪಾ ವಿರುಪಾಕ್ಷೇಶ್ವರ ದೇವಸ್ಥಾನ ಹುಂಡಿಯಲ್ಲಿ ಒಟ್ಟು ₹ 1,29,530 ಸಂಗ್ರಹವಾಗಿದೆ. ಈ ಹಿಂದೆ ಫೆಬ್ರವರಿ 22, 2019 ರಂದು ಪ್ರಸನ್ನ ಪಂಪಾ ವಿರುಪಾಕ್ಷೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ ಮಾಡಿದ್ದ ವೇಳೆಯಲ್ಲಿ ಒಟ್ಟು ₹ 58,380 ಸಂಗ್ರಹವಾಗಿತ್ತು ಎಂದರು.</p>.<p>ಗ್ರೇಡ್ 2 ತಹಶೀಲ್ದಾರ್ ವಿ.ಎಚ್.ಹೊರಪೇಟಿ, ದೇವಸ್ಥಾನದ ಕಾರ್ಯದರ್ಶಿ ಮಂಜುನಾಥ ಹಿರೇಮಠ, ಗಂಗಾವತಿ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ಅಭೀಷೆಕ, ಮಹಾಲಕ್ಷ್ಮೀ, ಕಾವ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>