ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ. 27ರಂದು ಕೊಪ್ಪಳಕ್ಕೆ ಮಾತೆ ಗಂಗಾದೇವಿ

Last Updated 26 ನವೆಂಬರ್ 2022, 5:24 IST
ಅಕ್ಷರ ಗಾತ್ರ

ಕೊಪ್ಪಳ: ಕೂಡಲಸಂಗಮದಲ್ಲಿ 2023ರ ಜ. 12ರಿಂದ ಮೂರು ದಿನ ನಡೆಯುವ 36ನೇ ವರ್ಷದ ಶರಣಮೇಳದ ಪ್ರಚಾರ ಕಾರ್ಯಕ್ಕಾಗಿ ನ. 27ರಂದು ನಗರಕ್ಕೆ ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರು ಬರಲಿದ್ದಾರೆ.

ಇಲ್ಲಿನ ವಿಶ್ವಗುರು ಬಸವೇಶ್ವರ ಟ್ರಸ್ಟ್, ರಾಷ್ಟ್ರೀಯ ಬಸವದಳ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಸಮಿತಿ, ಅಖಿಲ ಶರಣ ಸಾಹಿತ್ಯ ಪರಷತ್ ಹಾಗೂ ಕದಳಿ ವೇದಿಕೆ ಸಹಯೋಗದಲ್ಲಿ ಸಂಜೆ 6 ಗಂಟೆಗೆ ಕಿನ್ನಾಳ ರಸ್ತೆಯಲ್ಲಿರುವ ಗುರುಬಸವ ಮಹಾಮನೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಗುರು ಬಸವೇಶ್ವರ ಟ್ರಸ್ಟ್‌ ಕಾರ್ಯದರ್ಶಿ ರಾಜೇಶ ಸಸಿಮಠ ತಿಳಿಸಿದ್ದಾರೆ.

ಎಲ್ಲಾ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಮಾಜದ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT