<p><strong>ಕೊಪ್ಪಳ:</strong> ಬಿಜೆಪಿಯಿಂದ ಸತತ ಎರಡು ಬಾರಿ ಸಂಸದರಾಗಿರುವ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವ ಕಾರಣ ಅವರು ಕಾಂಗ್ರೆಸ್ ಪಕ್ಷದತ್ತ ಹೆಜ್ಜೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಟಿಕೆಟ್ ಘೋಷಣೆಯಾದ ದಿನದಿಂದಲೂ ಬಿಜೆಪಿ ಜೊತೆ ಅಂತರ ಕಾಯ್ದುಕೊಂಡಿರುವ ಅವರು, ನಗರದಲ್ಲಿ ಬುಧವಾರ ನಡೆದ ಮೈತ್ರಿ ಪಕ್ಷಗಳ ಜೊತೆಗಿನ ಸಭೆಗೂ ಹಾಜರಾಗಲಿಲ್ಲ.</p>.<p>ವರಿಷ್ಠರ ಜೊತೆ ಚರ್ಚೆಗೆ ಬೆಂಗಳೂರಿಗೆ ತೆರಳಿದ್ದ ಅವರು ಅಲ್ಲಿಯೇ ಉಳಿದುಕೊಂಡಿದ್ದಾರೆ. ಕುಟುಂಬದ ಸ್ನೇಹಿತರೂ ಆಗಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಂಸದರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ಪ್ರಮುಖರೊಬ್ಬರು, ‘ಎರಡು ಮೂರು ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದರು. </p>.<p>‘ಜನಾರ್ದನ ರೆಡ್ಡಿ ಕೂಡ ಬಿಜೆಪಿ ಸೇರಿದ್ದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂದು ಜಿಲ್ಲೆಯ ಕಾಂಗ್ರೆಸ್ ನಾಯಕರೇ ಸಂಗಣ್ಣ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಯುತ್ತಿದ್ದಾರೆ’ ಎಂದು ಮೂಲಗಳ ತಿಳಿಸಿವೆ. ಈ ಕುರಿತು ಪ್ರತಿಕ್ರಿಯೆ ಪಡೆಯಲು ಸಂಗಣ್ಣ ಕರಡಿ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಬಿಜೆಪಿಯಿಂದ ಸತತ ಎರಡು ಬಾರಿ ಸಂಸದರಾಗಿರುವ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವ ಕಾರಣ ಅವರು ಕಾಂಗ್ರೆಸ್ ಪಕ್ಷದತ್ತ ಹೆಜ್ಜೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ಟಿಕೆಟ್ ಘೋಷಣೆಯಾದ ದಿನದಿಂದಲೂ ಬಿಜೆಪಿ ಜೊತೆ ಅಂತರ ಕಾಯ್ದುಕೊಂಡಿರುವ ಅವರು, ನಗರದಲ್ಲಿ ಬುಧವಾರ ನಡೆದ ಮೈತ್ರಿ ಪಕ್ಷಗಳ ಜೊತೆಗಿನ ಸಭೆಗೂ ಹಾಜರಾಗಲಿಲ್ಲ.</p>.<p>ವರಿಷ್ಠರ ಜೊತೆ ಚರ್ಚೆಗೆ ಬೆಂಗಳೂರಿಗೆ ತೆರಳಿದ್ದ ಅವರು ಅಲ್ಲಿಯೇ ಉಳಿದುಕೊಂಡಿದ್ದಾರೆ. ಕುಟುಂಬದ ಸ್ನೇಹಿತರೂ ಆಗಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸಂಸದರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ಪ್ರಮುಖರೊಬ್ಬರು, ‘ಎರಡು ಮೂರು ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದರು. </p>.<p>‘ಜನಾರ್ದನ ರೆಡ್ಡಿ ಕೂಡ ಬಿಜೆಪಿ ಸೇರಿದ್ದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂದು ಜಿಲ್ಲೆಯ ಕಾಂಗ್ರೆಸ್ ನಾಯಕರೇ ಸಂಗಣ್ಣ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾಯುತ್ತಿದ್ದಾರೆ’ ಎಂದು ಮೂಲಗಳ ತಿಳಿಸಿವೆ. ಈ ಕುರಿತು ಪ್ರತಿಕ್ರಿಯೆ ಪಡೆಯಲು ಸಂಗಣ್ಣ ಕರಡಿ ಲಭ್ಯರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>