ಸೋಮವಾರ ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ‘ಕಾಂಗ್ರೆಸ್ ಬಿಟ್ಟು ಬಂದಿದ್ದಕ್ಕೆ ಕಾರ್ಯಕರ್ತರು ಬೇಸರಗೊಂಡಿದ್ದರು. ಇದರಿಂದ ನನಗೆ ಹಿಂದಿನ ಚುನಾವಣೆಯಲ್ಲಿ ಸೋಲಾಗಿರಬಹುದು. ಈಗ ಬಿಜೆಪಿಯೇ ನನಗೆ ಮಾತೃಪಕ್ಷ. ಒಂದೊಂದು ಚುನಾವಣೆಗೆ ಒಂದೊಂದು ಪಕ್ಷ ಆಯ್ಕೆ ಮಾಡಿಕೊಳ್ಳುವ ಜಾಯಾಮಾನ ನನ್ನದಲ್ಲ. ಇಷ್ಟು ವರ್ಷಗಳ ರಾಜಕೀಯ ಜೀವನದಲ್ಲಿ ಅಧಿಕಾರ, ಸ್ಥಾನಮಾನ ಹಾಗೂ ಅಂತಸ್ತು ಅನುಭವಿಸಿದ್ದೇನೆ. ಮುಂದೆಯೂ ಜನಸೇವೆ ಮಾಡುವುದಷ್ಟೇ ನನ್ನ ಕೆಲಸ’ ಎಂದರು.