ಬುಧವಾರ ಲೋಕ ಕಲ್ಯಾಣಕ್ಕಾಗಿ, ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗಾಗಿ ಕುಂಭದ ಮೆರವಣಿಗೆ ಜರುಗಿತು. ಮುದ್ದಾಂಬಿಕಾ ದೇವಿ, ಅನ್ನಪೂಣೇಶ್ವರಿ ದೇವಿ, ಕಾಳಿಕಾ ದೇವಿ ಹಾಗೂ ದ್ಯಾಮವ್ವ ದೇವಿಗೆ ಸಂಪ್ರದಾಯದಂತೆ ವಿಶೇಷ ಪೂಜೆ ನೆರವೇರಿಸಲಾಯಿತು. ಫಕೀರೇಶ್ವರ ಸ್ವಾಮೀಜಿ, ಶೇಖರಯ್ಯ ಹಿರೇಮಠ, ಗಣೇಶ ಶಾಸ್ತ್ರಿಗಳು ಅಭಿಷೇಕ ನೆರವೇರಿಸಿದರು.