<p><strong>ಕುಕನೂರು:</strong> ತಾಲ್ಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಶಾಲೆ, ಕಾಲೇಜು ಆವರಣ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟಿರುವ ಮೈದಾನದಲ್ಲಿ ಆಟವಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಮಕ್ಕಳಿದ್ದಾರೆ.</p>.<p>ಇದೇ ಆವರಣದಲ್ಲಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿದ್ದು, ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಆವರಣದಲ್ಲಿ ನೀರು ಹರಿದು ಕೆಸರು ಮಯವಾಗಿದೆ. ಬಹಳ ವರ್ಷಗಳಿಂದಲೂ ಈ ಸಮಸ್ಯೆಯಿದ್ದು, ಶಾಲಾ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಯಾಗಿದೆ. ವಿದ್ಯಾಭ್ಯಾಸ ಮಾಡುವ ಆವರಣ ಸುಂದರ, ಸ್ವಚ್ಛವಾಗಿರಬೇಕು. ಆದರೆ, ಶಾಲಾ ಆವರಣ ಮಾತ್ರ ಅಧೋಗತಿಗೆ ತಲುಪಿದೆ.</p>.<p>ಬಹಳ ವರ್ಷಗಳಿಂದಲೂ ಈ ಸಮಸ್ಯೆಯಿದ್ದು, ಈ ಬಾರಿ ಸಮಸ್ಯೆ ತೀವ್ರ ಉಲ್ಭಣಿಸಿದೆ. ನಿರ್ವಹಣೆ ಕೊರತೆಯೇ ಇದಕ್ಕೆ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ. ಇದರೊಂದಿಗೆ ಶಾಲಾ ಮೈದಾನವೂ ಸುರಕ್ಷತೆಯಿಂದ ಕೂಡಿಲ್ಲ. ಎಲ್ಲಿ ನೋಡಿದರೂ ಗುಂಡಿಗಳ ಹಾವಳಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ತಾಲ್ಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಶಾಲೆ, ಕಾಲೇಜು ಆವರಣ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟಿರುವ ಮೈದಾನದಲ್ಲಿ ಆಟವಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಮಕ್ಕಳಿದ್ದಾರೆ.</p>.<p>ಇದೇ ಆವರಣದಲ್ಲಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿದ್ದು, ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಆವರಣದಲ್ಲಿ ನೀರು ಹರಿದು ಕೆಸರು ಮಯವಾಗಿದೆ. ಬಹಳ ವರ್ಷಗಳಿಂದಲೂ ಈ ಸಮಸ್ಯೆಯಿದ್ದು, ಶಾಲಾ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅಡ್ಡಿಯಾಗಿದೆ. ವಿದ್ಯಾಭ್ಯಾಸ ಮಾಡುವ ಆವರಣ ಸುಂದರ, ಸ್ವಚ್ಛವಾಗಿರಬೇಕು. ಆದರೆ, ಶಾಲಾ ಆವರಣ ಮಾತ್ರ ಅಧೋಗತಿಗೆ ತಲುಪಿದೆ.</p>.<p>ಬಹಳ ವರ್ಷಗಳಿಂದಲೂ ಈ ಸಮಸ್ಯೆಯಿದ್ದು, ಈ ಬಾರಿ ಸಮಸ್ಯೆ ತೀವ್ರ ಉಲ್ಭಣಿಸಿದೆ. ನಿರ್ವಹಣೆ ಕೊರತೆಯೇ ಇದಕ್ಕೆ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಾರೆ. ಇದರೊಂದಿಗೆ ಶಾಲಾ ಮೈದಾನವೂ ಸುರಕ್ಷತೆಯಿಂದ ಕೂಡಿಲ್ಲ. ಎಲ್ಲಿ ನೋಡಿದರೂ ಗುಂಡಿಗಳ ಹಾವಳಿ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>