<p><strong>ಕೊಪ್ಪಳ</strong>: ತಾಲ್ಲೂಕಿನ ಮುದ್ಲಾಪುರ ಗ್ರಾಮದಿಂದ ಕಿನ್ನಾಳ ಮತ್ತು ಕೊಪ್ಪಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ಗ್ರಾಮಸ್ಥರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಿಸಿದ್ದಾರೆ.</p>.<p>ತಾಲ್ಲೂಕಿನ ಮುದ್ಲಾಪುರವು ಗಂಗಾವತಿ ಕ್ಷೇತ್ರಕ್ಕೆ ಒಳಪಡುತ್ತದೆ. ಹಾಗಾಗಿ ಗಂಗಾವತಿ ಮತ್ತು ಕೊಪ್ಪಳ ಶಾಸಕರಿಗೆ ಹಾಗೂ ವಿವಿಧ ಜನಪ್ರತಿನಿಧಿಗಳಿಗೆ ಬಹಳಷ್ಟು ಬಾರಿ ರಸ್ತೆ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ತಾಲ್ಲೂಕಿನ ಮುದ್ಲಾಪುರದಿಂದ ಕಿನ್ನಾಳ ಗ್ರಾಮಕ್ಕೆ 3 ಕಿಲೋ ಮೀಟರ್ ರಸ್ತೆ ಇದೆ. ಈ ರಸ್ತೆಯ ಮೂಲಕ ಮಕ್ಕಳು, ವೃದ್ಧರು, ಗರ್ಭಿಣಿಯರು, ರೋಗಿಗಳು ಸಂಚಾರ ಮಾಡುತ್ತಿದ್ದು, ರಸ್ತೆಯು ಗುಂಡಿಗಳಿಂದಲೇ ಆವೃತವಾಗಿದೆ. ಇದರಿಂದ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಆದರೆ ಮುದ್ಲಾಪುರ ಗ್ರಾಮಸ್ಥರು ತಾವೇ ರಸ್ತೆ ನಿರ್ಮಾಣ ಮಾಡಿಕೊಳ್ಳಲು ನಿರ್ಧರಿಸಿ, ಕಾರ್ಯಪ್ರವೃತ್ತರಾಗಿದ್ದಾರೆ. ಗ್ರಾಮಸ್ಥರೆಲ್ಲರೂ ಹಣ ಹಾಕಿದ್ದಾರೆ. ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರೇ ಉಚಿತವಾಗಿ ಇಟಾಚಿ, ಜೆಸಿಬಿ ಮತ್ತು ಟ್ರ್ಯಾಕ್ಟರ್ಗಳನ್ನು ಬಳಕೆ ಮಾಡಿಕೊಂಡಿದ್ದಾರೆ.</p>.<p>ಮುದ್ಲಾಪುರ ಗ್ರಾಮವು ಹಿರೇಹಳ್ಳ ಯೋಜನೆ ವ್ಯಾಪ್ತಿಯಲ್ಲಿದ್ದು, ಜಲಾಶಯಕ್ಕೆ ತೊಂದರೆಯಾದರೆ ಇದೇ ರಸ್ತೆಯ ಮೂಲಕವೇ ಹೋಗಬೇಕು. ಗ್ರಾಮಸ್ಥರೆಲ್ಲರೂ ಹಣ ಸಂಗ್ರಹಿಸಿ, ರಸ್ತೆ ಕಾಮಗಾರಿ ಮಾಡಲಾಗಿದೆ ಎಂದು ಗ್ರಾಮಸ್ಥ ವಿರುಪಾಕ್ಷಪ್ಪ ಬಾರಕೇರ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ತಾಲ್ಲೂಕಿನ ಮುದ್ಲಾಪುರ ಗ್ರಾಮದಿಂದ ಕಿನ್ನಾಳ ಮತ್ತು ಕೊಪ್ಪಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ಗ್ರಾಮಸ್ಥರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಿಸಿದ್ದಾರೆ.</p>.<p>ತಾಲ್ಲೂಕಿನ ಮುದ್ಲಾಪುರವು ಗಂಗಾವತಿ ಕ್ಷೇತ್ರಕ್ಕೆ ಒಳಪಡುತ್ತದೆ. ಹಾಗಾಗಿ ಗಂಗಾವತಿ ಮತ್ತು ಕೊಪ್ಪಳ ಶಾಸಕರಿಗೆ ಹಾಗೂ ವಿವಿಧ ಜನಪ್ರತಿನಿಧಿಗಳಿಗೆ ಬಹಳಷ್ಟು ಬಾರಿ ರಸ್ತೆ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ತಾಲ್ಲೂಕಿನ ಮುದ್ಲಾಪುರದಿಂದ ಕಿನ್ನಾಳ ಗ್ರಾಮಕ್ಕೆ 3 ಕಿಲೋ ಮೀಟರ್ ರಸ್ತೆ ಇದೆ. ಈ ರಸ್ತೆಯ ಮೂಲಕ ಮಕ್ಕಳು, ವೃದ್ಧರು, ಗರ್ಭಿಣಿಯರು, ರೋಗಿಗಳು ಸಂಚಾರ ಮಾಡುತ್ತಿದ್ದು, ರಸ್ತೆಯು ಗುಂಡಿಗಳಿಂದಲೇ ಆವೃತವಾಗಿದೆ. ಇದರಿಂದ ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಆದರೆ ಮುದ್ಲಾಪುರ ಗ್ರಾಮಸ್ಥರು ತಾವೇ ರಸ್ತೆ ನಿರ್ಮಾಣ ಮಾಡಿಕೊಳ್ಳಲು ನಿರ್ಧರಿಸಿ, ಕಾರ್ಯಪ್ರವೃತ್ತರಾಗಿದ್ದಾರೆ. ಗ್ರಾಮಸ್ಥರೆಲ್ಲರೂ ಹಣ ಹಾಕಿದ್ದಾರೆ. ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರೇ ಉಚಿತವಾಗಿ ಇಟಾಚಿ, ಜೆಸಿಬಿ ಮತ್ತು ಟ್ರ್ಯಾಕ್ಟರ್ಗಳನ್ನು ಬಳಕೆ ಮಾಡಿಕೊಂಡಿದ್ದಾರೆ.</p>.<p>ಮುದ್ಲಾಪುರ ಗ್ರಾಮವು ಹಿರೇಹಳ್ಳ ಯೋಜನೆ ವ್ಯಾಪ್ತಿಯಲ್ಲಿದ್ದು, ಜಲಾಶಯಕ್ಕೆ ತೊಂದರೆಯಾದರೆ ಇದೇ ರಸ್ತೆಯ ಮೂಲಕವೇ ಹೋಗಬೇಕು. ಗ್ರಾಮಸ್ಥರೆಲ್ಲರೂ ಹಣ ಸಂಗ್ರಹಿಸಿ, ರಸ್ತೆ ಕಾಮಗಾರಿ ಮಾಡಲಾಗಿದೆ ಎಂದು ಗ್ರಾಮಸ್ಥ ವಿರುಪಾಕ್ಷಪ್ಪ ಬಾರಕೇರ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>