ಇಲ್ಲಿ ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಇದೆ. 2008ರ ಚುನಾವಣೆಯಲ್ಲಿ ಭವಾನಿಮಠ ಬಹಳಷ್ಟು ಕಡಿಮೆ ಅಂತರದಲ್ಲಿ ಸೋತಿದ್ದಾರೆ. ಈಗಲೂ ಉತ್ತಮವಾಗಿ ಪಕ್ಷ ಸಂಘಟನೆ ಮಾಡಿದ್ದಾರೆ. ಕಾರ್ಯಕರ್ತರಲ್ಲಿ ಪ್ರೀತಿ ಹಾಗೂ ವಿಶ್ವಾಸ ಉಳಿಸಿಕೊಂಡಿದ್ದಾರೆ. ಅವರಿಗೂ ಟಿಕೆಟ್ ಕೊಟ್ಟರೆ ತಪ್ಪೇನಿಲ್ಲ’ ಎಂದರು.