ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ 'ಅಭಿನವ ಬಸವಣ್ಣ ಎಂದು ಖ್ಯಾತರಾದ ಗವಿಶ್ರೀಗಳ ದರ್ಶನ ಪಡೆಯಲು ಕೊಪ್ಪಳಕ್ಕೆ ಬಂದಿರುವೆ. ಇಲ್ಲಿಗೆ ಬಂದರೆ ಪ್ರೇರಣೆ ಸಿಗುತ್ತದೆ. ಶಿಕಾರಿಪುರ ಬಗ್ಗೆ ನಮ್ಮ ತಂದೆಗೆ ಅವಿನಾಭಾವ ಸಂಬಂಧ ಇದೆ. ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತರಾದವರನ್ನು ಆಯ್ಕೆ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ಯಡಿಯೂರಪ್ಪ 40 ವರ್ಷ ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷವೂ ಅವರಿಗೆ ಎಲ್ಲ ಸ್ಥಾನಮಾನ ನೀಡಿದೆ. ಕ್ಷೇತ್ರದ ಜನರ ಅಭಿಪ್ರಾಯದಂತೆ ನನಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾಗಿ ಹೇಳಿದ್ದಾರೆ.