<p><strong>ಗಂಗಾವತಿ:</strong> ‘ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಮಹಿಳಾ ಕಾಯಕೋತ್ಸವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಾ.ಪಂ ಇಒ ಡಾ.ಡಿ.ಮೋಹನ್ ಹೇಳಿದರು.</p>.<p>ತಾಲ್ಲೂಕಿನ ಸಂಗಾಪುರ ಗ್ರಾಮದ ಲಕ್ಷ್ಮೀ ನಾರಾಯಣ ಕೆರೆ ಪ್ರದೇಶದಲ್ಲಿ ಸಂಗಾಪುರ ಗ್ರಾ.ಪಂ ವತಿಯಿಂದ ನಡೆದ 2ನೇ ಹಂತದ ಮಹಿಳಾ ಕಾಯಕೋತ್ಸವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಾಯಕೋತ್ಸವ ಅಭಿಯಾನದಡಿ ತಾವೆಲ್ಲಾ ಕೆಲಸ ಮಾಡಲು ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ತಮಗೆ ತಮ್ಮೂರಲ್ಲೇ ಕೆಲಸವನ್ನು ನೀಡಲಾಗಿದೆ. ಪ್ರತಿಯೊಬ್ಬರು ಈ ಯೋಜನೆಯ ಉಪಯೋಗ ಮಾಡಿಕೊಳ್ಳಿ. ನೀವು ದುಡಿದ ಕೂಲಿ ಹಣ ನೇರವಾಗಿ ನಿಮ್ಮ ಖಾತೆಗೆ ಜಮವಾಗುತ್ತದೆ‘ ಎಂದರು.</p>.<p>ಕೂಲಿಕಾರರು ವ್ಯಕ್ತಿಗತ ಅಂತರದ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೆಲಸ ಮಾಡಬೇಕು ಎಂದರು.</p>.<p>ಇದೇ ವೇಳೆ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಲಸಿಕೆಯನ್ನು ಹಾಕಿದರು.</p>.<p>ಗ್ರಾ.ಪಂ ಅಧ್ಯಕ್ಷ ಹರೀಶ್ ಘಂಟಾ, ಉಪಾಧ್ಯಕ್ಷೆ ಯಲ್ಲಮ್ಮ ಬಸವರಾಜ್, ಸದಸ್ಯ ವೆಂಕಟೇಶ್, ಪಿಡಿಒ ಶೇಖ್ ಸಾಬ್, ಕಾರ್ಯದರ್ಶಿ ನೂರು ಉಲ್ ಹಕ್, ತಾ.ಪಂ ಐಇಸಿ ಸಂಯೋಜಕ ಶಿವಕುಮಾರ್ ಕೆ, ವೆಂಕೋಬ ಹಾಗೂ ಗ್ರಾ.ಪಂ ಸಿಬ್ಬಂದಿ ಮತ್ತು ಮಹಿಳಾ ಕೂಲಿಕಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ‘ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಮಹಿಳಾ ಕಾಯಕೋತ್ಸವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಾ.ಪಂ ಇಒ ಡಾ.ಡಿ.ಮೋಹನ್ ಹೇಳಿದರು.</p>.<p>ತಾಲ್ಲೂಕಿನ ಸಂಗಾಪುರ ಗ್ರಾಮದ ಲಕ್ಷ್ಮೀ ನಾರಾಯಣ ಕೆರೆ ಪ್ರದೇಶದಲ್ಲಿ ಸಂಗಾಪುರ ಗ್ರಾ.ಪಂ ವತಿಯಿಂದ ನಡೆದ 2ನೇ ಹಂತದ ಮಹಿಳಾ ಕಾಯಕೋತ್ಸವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಾಯಕೋತ್ಸವ ಅಭಿಯಾನದಡಿ ತಾವೆಲ್ಲಾ ಕೆಲಸ ಮಾಡಲು ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ತಮಗೆ ತಮ್ಮೂರಲ್ಲೇ ಕೆಲಸವನ್ನು ನೀಡಲಾಗಿದೆ. ಪ್ರತಿಯೊಬ್ಬರು ಈ ಯೋಜನೆಯ ಉಪಯೋಗ ಮಾಡಿಕೊಳ್ಳಿ. ನೀವು ದುಡಿದ ಕೂಲಿ ಹಣ ನೇರವಾಗಿ ನಿಮ್ಮ ಖಾತೆಗೆ ಜಮವಾಗುತ್ತದೆ‘ ಎಂದರು.</p>.<p>ಕೂಲಿಕಾರರು ವ್ಯಕ್ತಿಗತ ಅಂತರದ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೆಲಸ ಮಾಡಬೇಕು ಎಂದರು.</p>.<p>ಇದೇ ವೇಳೆ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಲಸಿಕೆಯನ್ನು ಹಾಕಿದರು.</p>.<p>ಗ್ರಾ.ಪಂ ಅಧ್ಯಕ್ಷ ಹರೀಶ್ ಘಂಟಾ, ಉಪಾಧ್ಯಕ್ಷೆ ಯಲ್ಲಮ್ಮ ಬಸವರಾಜ್, ಸದಸ್ಯ ವೆಂಕಟೇಶ್, ಪಿಡಿಒ ಶೇಖ್ ಸಾಬ್, ಕಾರ್ಯದರ್ಶಿ ನೂರು ಉಲ್ ಹಕ್, ತಾ.ಪಂ ಐಇಸಿ ಸಂಯೋಜಕ ಶಿವಕುಮಾರ್ ಕೆ, ವೆಂಕೋಬ ಹಾಗೂ ಗ್ರಾ.ಪಂ ಸಿಬ್ಬಂದಿ ಮತ್ತು ಮಹಿಳಾ ಕೂಲಿಕಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>