ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಬಿಜೆಪಿ ಖಂಡಿಸುತ್ತಿದೆ. ಯಾವುದೇ ಪಕ್ಷಗಳು ಇಂಥ ಸೂಕ್ಷ್ಮ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು, ಜಾತಿ ಆಧಾರದ ಮೇಲೆ ನಿಂದಿಸುವುದು ತಪ್ಪು. ಆದರೆ ಮುಖ್ಯಮಂತ್ರಿ, ಗೃಹಸಚಿವರು ಕೊಲೆಗೆ ವೈಯಕ್ತಿಕ ಕಾರಣ ಎಂಬ ನಿಲುವಿಗೆ ಬಂದು ತನಿಖೆಯ ದಿಕ್ಕನ್ನು ತಪ್ಪಿಸಲು ಯತ್ನಿಸಿರುವುದು ಸ್ಪಷ್ಟವಾಗಿದೆ’ ಎಂದರು.