<p><strong>ಕುಕನೂರು</strong>: ‘ಆರ್ಥಿಕವಾಗಿ ಹಿಂದುಳಿದವರು ಹಾಗೂ ದುರ್ಬಲ ವರ್ಗದವರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವ ಸಲುವಾಗಿ ಸರ್ಕಾರ ನರೇಗಾ ಯೋಜನೆ ಜಾರಿಗೆ ತಂದಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು‘ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನುಮ್ ಹೇಳಿದರು.</p>.<p>ತಾಲ್ಲೂಕಿನ ನೆಲಜೇರಿ ಗ್ರಾಮದಲ್ಲಿ ನರೇಗಾ ಕಾಮಗಾರಿಯನ್ನು ಪರಿಶೀಲಿಸಿ ನಂತರ ಅವರು ಮಾತನಾಡಿದರು.</p>.<p>ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮೀಣ ಪ್ರದೇಶದ ಜನರಿಗಾಗಿಯೇ ಒತ್ತು ನೀಡಿ ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ ನಮ್ಮ ಜಲ ಮೂಲಗಳಾದ ಕೆರೆ, ನಾಲಾ, ಹಳ್ಳ, ಭಾವಿ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ಕೆಲಸ ಕೊಡಬೇಕು. ಇದರಿಂದ ಜನರ ಕೈಗೆ ಹಣ ಸಿಗುತ್ತದೆ. ನಮ್ಮ ಜಲ ಮೂಲಗಳು ಪುನರುಜ್ಜೀವನ ಪಡೆಯುತ್ತವೆ. ಇದರಿಂದ ಅಂತರ್ಜಲ ಮಟ್ಟವೂ ಹೆಚ್ಚಳವಾಗುತ್ತದೆ ಎಂದರು.</p>.<p>ಪ್ರತಿಯೊಬ್ಬರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು.</p>.<p>ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಅಕುಶಲ ಕಾರ್ಮಿಕರ ಜತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ನೆಲಜೇರಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ್, ಪಂಚಾಯಿತಿ ಇಲಾಖೆಯ ತಾಲ್ಲೂಕು ಅಧಿಕಾರಿ ಮಹದೇವಪ್ಪ, ಸಹಾಯಕ ನಿರ್ದೇಶಕ ರಾಮಣ್ಣ ದೊಡ್ಡಮನಿ, ತಾಂತ್ರಿಕ ಸಂಯೋಜಕ ಯಮನೂರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಪಿಡಿಒ ಅಬ್ದುಲ್ ಗಫಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು</strong>: ‘ಆರ್ಥಿಕವಾಗಿ ಹಿಂದುಳಿದವರು ಹಾಗೂ ದುರ್ಬಲ ವರ್ಗದವರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವ ಸಲುವಾಗಿ ಸರ್ಕಾರ ನರೇಗಾ ಯೋಜನೆ ಜಾರಿಗೆ ತಂದಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು‘ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನುಮ್ ಹೇಳಿದರು.</p>.<p>ತಾಲ್ಲೂಕಿನ ನೆಲಜೇರಿ ಗ್ರಾಮದಲ್ಲಿ ನರೇಗಾ ಕಾಮಗಾರಿಯನ್ನು ಪರಿಶೀಲಿಸಿ ನಂತರ ಅವರು ಮಾತನಾಡಿದರು.</p>.<p>ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮೀಣ ಪ್ರದೇಶದ ಜನರಿಗಾಗಿಯೇ ಒತ್ತು ನೀಡಿ ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ ನಮ್ಮ ಜಲ ಮೂಲಗಳಾದ ಕೆರೆ, ನಾಲಾ, ಹಳ್ಳ, ಭಾವಿ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ಕೆಲಸ ಕೊಡಬೇಕು. ಇದರಿಂದ ಜನರ ಕೈಗೆ ಹಣ ಸಿಗುತ್ತದೆ. ನಮ್ಮ ಜಲ ಮೂಲಗಳು ಪುನರುಜ್ಜೀವನ ಪಡೆಯುತ್ತವೆ. ಇದರಿಂದ ಅಂತರ್ಜಲ ಮಟ್ಟವೂ ಹೆಚ್ಚಳವಾಗುತ್ತದೆ ಎಂದರು.</p>.<p>ಪ್ರತಿಯೊಬ್ಬರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು.</p>.<p>ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಅಕುಶಲ ಕಾರ್ಮಿಕರ ಜತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ನೆಲಜೇರಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಲಾ ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ್, ಪಂಚಾಯಿತಿ ಇಲಾಖೆಯ ತಾಲ್ಲೂಕು ಅಧಿಕಾರಿ ಮಹದೇವಪ್ಪ, ಸಹಾಯಕ ನಿರ್ದೇಶಕ ರಾಮಣ್ಣ ದೊಡ್ಡಮನಿ, ತಾಂತ್ರಿಕ ಸಂಯೋಜಕ ಯಮನೂರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಪಿಡಿಒ ಅಬ್ದುಲ್ ಗಫಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>