‘ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡಿ ಅಥವಾ ಕರೆ ಮಾಡುವ ಮೂಲಕ ತಿಳಿಸಬೇಕು. 24 ಗಂಟೆಯಲ್ಲೇ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಠಾಣಾ ವ್ಯಾಪ್ತಿಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಜನರ ಸೇವೆ ಸಲ್ಲಿಸಲು ಸಿದ್ಧವಿದ್ದು, ಅಪರಾಧ ತಡೆಗಟ್ಟುವಲ್ಲಿ ಜನರ ಸಹಕಾರ ಅಗತ್ಯವಾಗಿದೆ’ ಎಂದು ಹೇಳಿದರು.