ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋತರೂ ಪರವಾಗಿಲ್ಲ ಎಂಬುವವರಿಗೆ ಟಿಕೆಟ್‌ ಇಲ್ಲ: ಸಿ.ಟಿ. ರವಿ

Last Updated 12 ಮಾರ್ಚ್ 2023, 16:32 IST
ಅಕ್ಷರ ಗಾತ್ರ

ಕುಷ್ಟಗಿ (ಕೊಪ್ಪಳ ಜಿಲ್ಲೆ): ‘ಸೋತರೂ ಪರವಾಗಿಲ್ಲ ಎಂಬುವವರಿಗೆ ಟಿಕೆಟ್‌ ನೀಡುವುದಿಲ್ಲ. ಗೆಲ್ಲುವ ಸಾಧ್ಯತೆಯೇ ಪ್ರಮುಖ ಮಾನದಂಡ. ಕೆಲವು ಸಂದರ್ಭಗಳಲ್ಲಿ ಪಕ್ಷ ಹೊಸ ಪ್ರಯೋಗಗಳನ್ನು ನಡೆಸಿ ಅದರಲ್ಲಿ ಯಶಸ್ವಿಯೂ ಆಗಿದ್ದು, ಆ ಮಾದರಿಯಲ್ಲಿ ಟಿಕೆಟ್‌ ಹಂಚಿಕೆಯಾಗಲಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಕೆಲ ಹಾಲಿ ಶಾಸಕರಿಗೆ ಟಿಕೆಟ್‌ ಸಿಗುವುದಿಲ್ಲ ಎಂಬ ಬಿ.ಎಸ್‌. ಯಡಿಯೂರಪ್ಪ ಅವರ ಹೇಳಿಕೆಗೆ ಸಹಮತ ಇದೆ. ಆದರೆ ಅವರು ಯಾರ ಬಗ್ಗೆ ಹೇಳಿದ್ದಾರೊ ಗೊತ್ತಿಲ್ಲ. ಹಳೆ ಬೇರು ಹೊಸ ಚಿಗುರು ಮೂಡಿರಲು ಮರ ಸೊಬಗು. ಹಳೆ ಬೇರಿನ ಜತೆ ಹೊಸ ಚಿಗುರುಗಳೂ ಇರುತ್ತವೆ’ ಎಂದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿರುವ ಕುರಿತ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ರವಿ, ‘ಆ ವಿಚಾರ ನ್ಯಾಯಾಲಯದಲ್ಲಿದೆ. ತಡೆಯಾಜ್ಞೆ ತೆರವಿನ ನಂತರ ಆ ಬಗ್ಗೆ ನಿರ್ಧರಿಸಲಾಗುತ್ತದೆ. ತಳಸಮುದಾಯ, ಶೋಷಿತರು ಸೇರಿದಂತೆ ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ನೋಡಿಕೊಳ್ಳುವುದು ಪಕ್ಷದ ನೀತಿಯಾಗಿದೆ’ ಎಂದು ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT