ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿರುವ ಕುರಿತ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದ ರವಿ, ‘ಆ ವಿಚಾರ ನ್ಯಾಯಾಲಯದಲ್ಲಿದೆ. ತಡೆಯಾಜ್ಞೆ ತೆರವಿನ ನಂತರ ಆ ಬಗ್ಗೆ ನಿರ್ಧರಿಸಲಾಗುತ್ತದೆ. ತಳಸಮುದಾಯ, ಶೋಷಿತರು ಸೇರಿದಂತೆ ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ನೋಡಿಕೊಳ್ಳುವುದು ಪಕ್ಷದ ನೀತಿಯಾಗಿದೆ’ ಎಂದು ತಿಳಿಸಿದರು