ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಅಭಿಯಾನ ಕಾರ್ಯಕ್ರಮ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ‘ಕೇಂದ್ರದ ಮಾರ್ಗಸೂಚಿಯಂತೆ ಆ. 11 ರಿಂದ 17ರ ವರೆಗೆ ಎಲ್ಲ ಸರ್ಕಾರಿ ಕಚೇರಿಗಳು, ಮನೆಗಳು, ವ್ಯಾಪಾರಿ ಮಳಿಗೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಬೇಕು. ಸ್ವಾತಂತ್ರ್ಯ ಹೋರಾಟ, ತ್ಯಾಗ, ಬಲಿದಾನಗಳನ್ನು ಮಾಡಿದ ಎಲ್ಲರನ್ನು ಸ್ಮರಿಸಬೇಕು‘ ಎಂದರು.