<p><strong>ಕೊಪ್ಪಳ</strong>: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅನಧಿಕೃತ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮೇಲೆ ತೀವ್ರ ನಿಗಾವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.</p>.<p>ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಕಾಯ್ದೆ ಮತ್ತು ಸಂರಕ್ಷಣೆ ಅಧಿನಿಯಮ-2020ರ ಅನ್ವಯ ಗೋ ಹತ್ಯೆ ನಿಷೇಧಿಸಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಬಾಹಿರವಾಗಿದ್ದು, ಎಲ್ಲಾ ವಯಸ್ಸಿನ ಆಕಳು, ಆಕಳು ಕರು, ಹೋರಿ, ಎತ್ತು ಅಲ್ಲದೆ 13 ವರ್ಷದೊಳಗಿನ ಎಮ್ಮೆ, ಕೋಣ ಹಾಗೂ ಉಚ್ಚ ನ್ಯಾಯಾಲಯದ ಆದೇಶದನ್ವಯ ಒಂಟೆಗಳನ್ನು ಹತ್ಯೆ ಮಾಡುವಂತಿಲ್ಲ’ ಎಂದು ಸೂಚಿಸಿದರು.</p>.<p>‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಅತ್ಯವಶ್ಯಕತೆ ಇದ್ದು, ಈ ಕುರಿತು ಪಶು ಇಲಾಖೆ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಂಡಗಳನ್ನು ರಚಿಸಿ, ಸೂಕ್ತ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ ಸ್ಥಳಗಳಲ್ಲಿ ಚೆಕ್ಪೋಸ್ಟ್ ತೆರೆಯಬೇಕು. ಅಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದರು.</p>.<p>‘ಜೂನ್ 6ರ ಒಳಗೆ ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಲ್ಲಿ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ಕರೆಯಬೇಕು’ ಎಂದು ಹೇಳಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಡಿವೈಎಸ್ಪಿ ಮುತ್ತಣ್ಣ ಸರವಗೋಳ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅನಧಿಕೃತ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮೇಲೆ ತೀವ್ರ ನಿಗಾವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.</p>.<p>ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಕಾಯ್ದೆ ಮತ್ತು ಸಂರಕ್ಷಣೆ ಅಧಿನಿಯಮ-2020ರ ಅನ್ವಯ ಗೋ ಹತ್ಯೆ ನಿಷೇಧಿಸಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಬಾಹಿರವಾಗಿದ್ದು, ಎಲ್ಲಾ ವಯಸ್ಸಿನ ಆಕಳು, ಆಕಳು ಕರು, ಹೋರಿ, ಎತ್ತು ಅಲ್ಲದೆ 13 ವರ್ಷದೊಳಗಿನ ಎಮ್ಮೆ, ಕೋಣ ಹಾಗೂ ಉಚ್ಚ ನ್ಯಾಯಾಲಯದ ಆದೇಶದನ್ವಯ ಒಂಟೆಗಳನ್ನು ಹತ್ಯೆ ಮಾಡುವಂತಿಲ್ಲ’ ಎಂದು ಸೂಚಿಸಿದರು.</p>.<p>‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಅತ್ಯವಶ್ಯಕತೆ ಇದ್ದು, ಈ ಕುರಿತು ಪಶು ಇಲಾಖೆ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಂಡಗಳನ್ನು ರಚಿಸಿ, ಸೂಕ್ತ ನಿಗಾ ವಹಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ ಸ್ಥಳಗಳಲ್ಲಿ ಚೆಕ್ಪೋಸ್ಟ್ ತೆರೆಯಬೇಕು. ಅಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದರು.</p>.<p>‘ಜೂನ್ 6ರ ಒಳಗೆ ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಲ್ಲಿ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಮ್ಮುಖದಲ್ಲಿ ಶಾಂತಿ ಸಭೆ ಕರೆಯಬೇಕು’ ಎಂದು ಹೇಳಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಡಿವೈಎಸ್ಪಿ ಮುತ್ತಣ್ಣ ಸರವಗೋಳ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>