<p><strong>ಗಂಗಾವತಿ:</strong> ತಾಲ್ಲೂಕಿನ ಸಾಣಾಪುರ ಗ್ರಾಮದ ನಿಷೇಧಿತ ಅರಣ್ಯ ವಲಯ ಪ್ರದೇಶದಲ್ಲಿರುವ ಕೆರೆಯಲ್ಲಿ ಅನಧಿಕೃತವಾಗಿ ಪುನಃ ಆರಂಭವಾಗಿರುವ ಹರಿಗೋಲು ಸವಾರಿಗೆ ಈಗ ಅರಣ್ಯ ಇಲಾಖೆಯೇ ಅಧಿಕೃತ ಮುದ್ರೆ ಒತ್ತಲು ಸಿದ್ಧತೆ ನಡೆಸುತ್ತಿದೆ.</p>.<p>ಅಂಜನಾದ್ರಿ, ನವ ವೃಂದಾವನ, ಸಾಣಾಪುರ ಸೇರಿದಂತೆ ಹಲವು ಪ್ರವಾಸೋದ್ಯಮ ಹಾಗೂ ಐತಿಹಾಸಿಕ ಸ್ಥಳಗಳು ಈ ಭಾಗದಲ್ಲಿರುವ ಕಾರಣ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಶಾಸಕ ಜನಾರ್ದನ ರೆಡ್ಡಿ ತರಾತುರಿಯಲ್ಲಿ ಹರಿಗೋಲು ಬಳಕೆಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದರಂತೆ ಅರಣ್ಯ ಇಲಾಖೆಯಿಂದಲೇ ಟಿಕೆಟ್ ವಿತರಣೆ ಮಾಡಲಾಗಿತ್ತು. ಖುದ್ದು ಶಾಸಕರೇ ಹರಿಗೋಲಿನಲ್ಲಿ ವಿಹರಿಸಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಸಾಕಷ್ಟು ಟೀಕೆಯೂ ವ್ಯಕ್ತವಾಗಿದೆ.</p>.<p>ಆದ್ದರಿಂದ ಅರಣ್ಯ ಇಲಾಖೆ ಈಗ ಸ್ಥಳೀಯ ಆಡಳಿತದ ಜೊತೆ ‘ಪರಸ್ಪರ ಒಪ್ಪಂದದ ತಿಳಿವಳಿಕೆ ಪತ್ರ’ (ಎಂಒಯು) ಮಾಡಿಕೊಳ್ಳಲು ಮುಂದಾಗಿದೆ.</p>.<p>ಸೋಮವಾರ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಹರಿಗೋಲು ಸವಾರಿ ಹಾಗೂ ಟಿಕೆಟ್ ವಿತರಣೆ ಕಾರ್ಯಕ್ರಮವನ್ನು ಶಿಷ್ಟಾಚಾರ ಉಲ್ಲಂಘಿಸಿ ನಡೆಸಲಾಗಿದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.</p>.<p>ಈ ಎಲ್ಲಾ ಬೆಳವಣಿಗೆಗಳ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ 16 ಜನ ಹರಿಗೋಲು ಸವಾರರಿಗೆ ಕೆರೆಯಲ್ಲಿ ಹರಿಗೋಲು ಹಾಕಲು ಅನುಮತಿ ಕೊಡುವ ಸಲುವಾಗಿಯೇ ಗಂಗಾವತಿಗೆ ಕರೆಯಿಸಿಕೊಂಡಿದ್ದರು ಎಂದು ಮೂಲಗಳು ಖಚಿತಪಡಿಸಿವೆ.</p>.<p>ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಕಾರಣ ಮುಂದಿಟ್ಟು ಹರಿಗೋಲು ಹಾಕಲು ಅನುಮತಿ ನೀಡಿದ್ದಾರೆ. ಆದರೆ, ಇದರ ಬಗ್ಗೆ ಮೇಲಧಿಕಾರಿಗಳಿಂದ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸಾಣಾಪುರ ವ್ಯಾಪ್ತಿಯ ಗಂಗಾವತಿ ತಾಲ್ಲೂಕು ಪಂಚಾಯಿತಿಯಾಗಲಿ, ಸಾಣಾಪುರ ಗ್ರಾಮ ಪಂಚಾಯಿತಿಗೆ ಯಾರೂ ಮಾಹಿತಿ ನೀಡಿಲ್ಲ ಎಂದು ಅಲ್ಲಿನ ಪ್ರಮುಖರೇ ತಿಳಿಸಿದ್ದಾರೆ.</p>.<p>ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿದ ಗಂಗಾವತಿ ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮಿದೇವಿ ‘ಹರಿಗೋಲು ಸವಾರಿಗೆ ಯಾರೂ ನಮ್ಮಿಂದ ಪರವಾನಗಿ ಪಡೆದಿಲ್ಲ. ಕರೆಯಲ್ಲಿ ಅನಾಹುತ ನಡೆದರೆ ಅರಣ್ಯ ಇಲಾಖೆಯೇ ಅದರ ಹೊಣೆ ಹೊತ್ತುಕೊಳ್ಳಬೇಕು. ಯಾರೂ ಚರ್ಚಿಸಿಲ್ಲ’ ಎಂದು ಹೇಳಿದರು.</p>.<p>Highlights - null</p>.<p>Quote - ಪ್ರವಾಸೋದ್ಯಮ ಬೆಳೆಸಲು ಹರಿಗೋಲು ಆರಂಭಿಸಲಾಗುತ್ತಿದ್ದು ಈ ಕುರಿತು ಎಂಒಯು ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಟಿಕೆಟ್ ಸಂಗ್ರಹದಿಂದ ಬರುವ ಹಣವನ್ನು ಸ್ಥಳೀಯ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಚಂದ್ರಣ್ಣ ಎ. ಡಿಎಫ್ಒ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಸಾಣಾಪುರ ಗ್ರಾಮದ ನಿಷೇಧಿತ ಅರಣ್ಯ ವಲಯ ಪ್ರದೇಶದಲ್ಲಿರುವ ಕೆರೆಯಲ್ಲಿ ಅನಧಿಕೃತವಾಗಿ ಪುನಃ ಆರಂಭವಾಗಿರುವ ಹರಿಗೋಲು ಸವಾರಿಗೆ ಈಗ ಅರಣ್ಯ ಇಲಾಖೆಯೇ ಅಧಿಕೃತ ಮುದ್ರೆ ಒತ್ತಲು ಸಿದ್ಧತೆ ನಡೆಸುತ್ತಿದೆ.</p>.<p>ಅಂಜನಾದ್ರಿ, ನವ ವೃಂದಾವನ, ಸಾಣಾಪುರ ಸೇರಿದಂತೆ ಹಲವು ಪ್ರವಾಸೋದ್ಯಮ ಹಾಗೂ ಐತಿಹಾಸಿಕ ಸ್ಥಳಗಳು ಈ ಭಾಗದಲ್ಲಿರುವ ಕಾರಣ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಶಾಸಕ ಜನಾರ್ದನ ರೆಡ್ಡಿ ತರಾತುರಿಯಲ್ಲಿ ಹರಿಗೋಲು ಬಳಕೆಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದರಂತೆ ಅರಣ್ಯ ಇಲಾಖೆಯಿಂದಲೇ ಟಿಕೆಟ್ ವಿತರಣೆ ಮಾಡಲಾಗಿತ್ತು. ಖುದ್ದು ಶಾಸಕರೇ ಹರಿಗೋಲಿನಲ್ಲಿ ವಿಹರಿಸಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಸಾಕಷ್ಟು ಟೀಕೆಯೂ ವ್ಯಕ್ತವಾಗಿದೆ.</p>.<p>ಆದ್ದರಿಂದ ಅರಣ್ಯ ಇಲಾಖೆ ಈಗ ಸ್ಥಳೀಯ ಆಡಳಿತದ ಜೊತೆ ‘ಪರಸ್ಪರ ಒಪ್ಪಂದದ ತಿಳಿವಳಿಕೆ ಪತ್ರ’ (ಎಂಒಯು) ಮಾಡಿಕೊಳ್ಳಲು ಮುಂದಾಗಿದೆ.</p>.<p>ಸೋಮವಾರ ಅರಣ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಹರಿಗೋಲು ಸವಾರಿ ಹಾಗೂ ಟಿಕೆಟ್ ವಿತರಣೆ ಕಾರ್ಯಕ್ರಮವನ್ನು ಶಿಷ್ಟಾಚಾರ ಉಲ್ಲಂಘಿಸಿ ನಡೆಸಲಾಗಿದೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.</p>.<p>ಈ ಎಲ್ಲಾ ಬೆಳವಣಿಗೆಗಳ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಮಂಗಳವಾರ 16 ಜನ ಹರಿಗೋಲು ಸವಾರರಿಗೆ ಕೆರೆಯಲ್ಲಿ ಹರಿಗೋಲು ಹಾಕಲು ಅನುಮತಿ ಕೊಡುವ ಸಲುವಾಗಿಯೇ ಗಂಗಾವತಿಗೆ ಕರೆಯಿಸಿಕೊಂಡಿದ್ದರು ಎಂದು ಮೂಲಗಳು ಖಚಿತಪಡಿಸಿವೆ.</p>.<p>ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಕಾರಣ ಮುಂದಿಟ್ಟು ಹರಿಗೋಲು ಹಾಕಲು ಅನುಮತಿ ನೀಡಿದ್ದಾರೆ. ಆದರೆ, ಇದರ ಬಗ್ಗೆ ಮೇಲಧಿಕಾರಿಗಳಿಂದ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸಾಣಾಪುರ ವ್ಯಾಪ್ತಿಯ ಗಂಗಾವತಿ ತಾಲ್ಲೂಕು ಪಂಚಾಯಿತಿಯಾಗಲಿ, ಸಾಣಾಪುರ ಗ್ರಾಮ ಪಂಚಾಯಿತಿಗೆ ಯಾರೂ ಮಾಹಿತಿ ನೀಡಿಲ್ಲ ಎಂದು ಅಲ್ಲಿನ ಪ್ರಮುಖರೇ ತಿಳಿಸಿದ್ದಾರೆ.</p>.<p>ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿದ ಗಂಗಾವತಿ ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮಿದೇವಿ ‘ಹರಿಗೋಲು ಸವಾರಿಗೆ ಯಾರೂ ನಮ್ಮಿಂದ ಪರವಾನಗಿ ಪಡೆದಿಲ್ಲ. ಕರೆಯಲ್ಲಿ ಅನಾಹುತ ನಡೆದರೆ ಅರಣ್ಯ ಇಲಾಖೆಯೇ ಅದರ ಹೊಣೆ ಹೊತ್ತುಕೊಳ್ಳಬೇಕು. ಯಾರೂ ಚರ್ಚಿಸಿಲ್ಲ’ ಎಂದು ಹೇಳಿದರು.</p>.<p>Highlights - null</p>.<p>Quote - ಪ್ರವಾಸೋದ್ಯಮ ಬೆಳೆಸಲು ಹರಿಗೋಲು ಆರಂಭಿಸಲಾಗುತ್ತಿದ್ದು ಈ ಕುರಿತು ಎಂಒಯು ಮಾಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಟಿಕೆಟ್ ಸಂಗ್ರಹದಿಂದ ಬರುವ ಹಣವನ್ನು ಸ್ಥಳೀಯ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಚಂದ್ರಣ್ಣ ಎ. ಡಿಎಫ್ಒ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>