‘ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹಕರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಜನರು ಸರ್ಕಾರದ ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಜ್ಜಾಗಿದ್ದಾರೆ. ಆದರೆ ಜಿಲ್ಲೆಯ ಗ್ರಾಮೀಣ ಜನತೆ ನಿತ್ಯ ಕೃಷಿ ಕಾರ್ಯ ಮತ್ತು ಖಾತರಿ ಯೋಜನೆಯಿಂದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಕನಕಗಿರಿ, ಗಂಗಾವತಿ ಮತ್ತು ಕಾರಟಗಿ ತಾಲ್ಲೂಕು ಸೇರಿದಂತೆ ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗಳು ಉದ್ಯೋಗ ಸೃಷ್ಟಿಸಿವೆ’ ಎಂದರು.