<p><strong>ಯಲಬುರ್ಗಾ:</strong> ಬಾಕಿ ವೇತನ ಪಾವತಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನರೇಗಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ.</p>.<p>ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೇರಿದ ವಿವಿಧ ಹಂತದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಪ್ರತಿಭಟನೆ ಬೆಂಬಲಿಸಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ವೀರನಗೌಡ ಹಾಗೂ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ ಭೇಟಿ ನೀಡಿ ಮಾತನಾಡಿ,‘ನರೇಗಾ ಸಿಬ್ಬಂದಿ ತಾಳ್ಮೆಯಿಂದಲೇ ಕಾರ್ಯನಿರ್ವಹಿಸಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಬಾಕಿ ವೇತನ ಬಿಡುಗಡೆಯಾಗದ ಕಾರಣ ವೇತನ ನೀಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ವೇತನಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು. ತ್ವರಿತವಾಗಿ ವೇತನ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು, ಪಿಡಿಒ, ಕಾರ್ಯದರ್ಶಿಗಳು ಹಾಗೂ ಇನ್ನಿತರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ಬಾಕಿ ವೇತನ ಪಾವತಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನರೇಗಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವೂ ಮುಂದುವರಿದಿದೆ.</p>.<p>ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೇರಿದ ವಿವಿಧ ಹಂತದ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಪ್ರತಿಭಟನೆ ಬೆಂಬಲಿಸಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ವೀರನಗೌಡ ಹಾಗೂ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಫಕೀರಪ್ಪ ಕಟ್ಟಿಮನಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ ಭೇಟಿ ನೀಡಿ ಮಾತನಾಡಿ,‘ನರೇಗಾ ಸಿಬ್ಬಂದಿ ತಾಳ್ಮೆಯಿಂದಲೇ ಕಾರ್ಯನಿರ್ವಹಿಸಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಬಾಕಿ ವೇತನ ಬಿಡುಗಡೆಯಾಗದ ಕಾರಣ ವೇತನ ನೀಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಮೇಲಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ವೇತನಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು. ತ್ವರಿತವಾಗಿ ವೇತನ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು, ಪಿಡಿಒ, ಕಾರ್ಯದರ್ಶಿಗಳು ಹಾಗೂ ಇನ್ನಿತರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>